ಇಲ್ಲಿ ದುಡ್ಡುಕೊಟ್ರೆ ಪರೀಕ್ಷೆ ಪಾಸ್, ಫುಲ್ ಮಾರ್ಕ್ಸ್! ಇದು ಕರ್ನಾಟಕ ರಾಜ್ಯ ಮುಕ್ತ ವಿವಿ ಕರ್ಮಕಾಂಡ

ಇಲ್ಲಿ ದುಡ್ಡುಕೊಟ್ರೆ ಪರೀಕ್ಷೆ ಪಾಸ್, ಫುಲ್ ಮಾರ್ಕ್ಸ್! ಇದು ಕರ್ನಾಟಕ ರಾಜ್ಯ ಮುಕ್ತ ವಿವಿ ಕರ್ಮಕಾಂಡ

Published : Sep 13, 2023, 09:42 AM IST

ಮೊನ್ನೆ ಮೊನ್ನೆಯಷ್ಟೆ ಬಳ್ಳಾರಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮೊಬೈಲ್‌ ಹಿಡಿದು ಮಾಸ್ ಕಾಪಿ ಮಾಡುತ್ತಿದ್ದ ವಿಡಿಯೋ ಬಹಿರಂಗ ಆಗಿತ್ತು. ಆದ್ರೆ ಈಗ ದುಡ್ ಕೊಟ್ರೆ ಮಾಸ್ ಕಾಪಿಗೆ ಸಿಬ್ಬಂದಿಯೇ ಅವಕಾಶ ಕೊಡುತ್ತಾರೆ ಅನ್ನೋ ರಹಸ್ಯ ಬೆಳಕಿಗೆ ಬಂದಿದೆ. 
 

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ. ಸದಾ ಒಂದಿಲ್ಲೊಂದು ಕಾಂಟ್ರವರ್ಸಿ, ಕರ್ಮಕಾಂಡಕ್ಕೆ ಸುದ್ದಿಯಾಗುತ್ತಿರುತ್ತೆ. ವಿದ್ಯಾರ್ಥಿಗಳ ಪಾಲಿಗೆ ವರ ಆಗಬೇಕಿದ್ದ ಮೈಸೂರಿನ(Mysore) ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯ ಅವರ ಪಾಲಿನ ಉರುಳಾಗಿ ಬೆಳೆದಿದೆ. ಜ್ಞಾನಾರ್ಜನೆಗೆ ಬರುವ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ನೀಡದೆ, ಅಕ್ರಮಗಳನ್ನು ನಡೆಸಿ ಪ್ರಾಮಾಣಿಕ ವಿದ್ಯಾರ್ಥಿಗಳ ಪಾಲಿಗೆ ಶಾಪವಾಗ್ತಿದೆ. ಇದು ಪ್ರಾಮಾಣಿಕ ವಿದ್ಯಾರ್ಥಿಯೊಬ್ಬ(Student) ವಿವಿ ಪ್ರಾಧ್ಯಾಪಕರಿಗೆ ಪೋನ್ ಮಾಡಿ ಗೋಳಾಡಿದ ಆಡಿಯೋ. ವಿವಿಯ ಸಹಾಯಕ ಪ್ರಾಧ್ಯಾಪಕ ಜಗದೀಶ್ ಬಾಬು ಹಾಗೂ ಚಿತ್ರದುರ್ಗ ಮೂಲದ ವಿದ್ಯಾರ್ಥಿಯ ಸಂಭಾಷಣೆಯಲ್ಲಿ ಮಂಡ್ಯ, ಚಿತ್ರದುರ್ಗ, ದಾವಣಗೆರೆಯ (Davanagere)ಪರೀಕ್ಷಾ ಕೇಂದ್ರಗಳ ಲಂಚಾವತಾರ ಬಿಚ್ಚಿಟ್ಟಿದ್ದಾರೆ . ಕಳೆದ ಸೆಮಿಸ್ಟರ್ ಬಹುತೇಕ ಪರೀಕ್ಷೆಗಳಲ್ಲಿ‌ ಮಾಸ್ ಕಾಫಿ ನಡೆದಿದ್ದು, ಒಂದು ಸಾವಿರ ಕೊಟ್ಟರೆ ಎಂ,ಎ ಹಾಗೂ ಎಂ.ಕಾಂ ಪರೀಕ್ಷೆಗಳಲ್ಲಿ ಹಾಗೂ ಒಂದುವರೆ ಸಾವಿರ ಕೊಟ್ಟರೆ ಎಂ.ಎಸ್ಸಿ ಪರೀಕ್ಷೆಗಳನ್ನು ಕಾಪಿ ಮಾಡಬಹುದಂತೆ. ದುಡ್ಡು ಕೊಡಲಿಲ್ಲ ಅಂದ್ರೆ ಸಪರೇಟ್ ರೂಂ ನಲ್ಲಿ ಸ್ಟ್ರಿಕ್ಟ್ ಆಗಿ ಪರೀಕ್ಷೆ ಬರೆಸ್ತಾರೆ ಎಂದು ವಿದ್ಯಾರ್ಥಿ ಆರೋಪಿಸಿದ್ದಾನೆ. ಕರ್ನಾಟಕ ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ವರವಾಗಲಿ ಎಂದು ಸ್ಥಾಪನೆಯಾಗಿದೆ. ಆದ್ರಿಲ್ಲಿ ಸಿಬ್ಬಂದಿಗಳು ತಮ್ಮ ಆರ್ಥಿಕತೆಗೆ ಅನುಕೂಲವಾಗುವಂತೆ ಬಳಸಿಕೊಳ್ಳುವಂತೆ ಕಾಣ್ತಿದೆ. ರಾಜ್ಯ ಸರ್ಕಾರ ಮಧ್ಯ ಪ್ರವೆಶ ಮಾಡಿ ಈ ಕರ್ಮಕಾಂಡಕ್ಕೆ ಬ್ರೇಕ್ ಹಾಕಬೇಕಿದೆ.

ಇದನ್ನೂ ವೀಕ್ಷಿಸಿ:  Today Horoscope: ಮೇಷದಿಂದ ಮೀನ- ಯಾವ ರಾಶಿಯವರಿಗೆ ಏನುಫಲ ? ನೀವು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳೇನು ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more