ಇಲ್ಲಿ ದುಡ್ಡುಕೊಟ್ರೆ ಪರೀಕ್ಷೆ ಪಾಸ್, ಫುಲ್ ಮಾರ್ಕ್ಸ್! ಇದು ಕರ್ನಾಟಕ ರಾಜ್ಯ ಮುಕ್ತ ವಿವಿ ಕರ್ಮಕಾಂಡ

ಇಲ್ಲಿ ದುಡ್ಡುಕೊಟ್ರೆ ಪರೀಕ್ಷೆ ಪಾಸ್, ಫುಲ್ ಮಾರ್ಕ್ಸ್! ಇದು ಕರ್ನಾಟಕ ರಾಜ್ಯ ಮುಕ್ತ ವಿವಿ ಕರ್ಮಕಾಂಡ

Published : Sep 13, 2023, 09:42 AM IST

ಮೊನ್ನೆ ಮೊನ್ನೆಯಷ್ಟೆ ಬಳ್ಳಾರಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮೊಬೈಲ್‌ ಹಿಡಿದು ಮಾಸ್ ಕಾಪಿ ಮಾಡುತ್ತಿದ್ದ ವಿಡಿಯೋ ಬಹಿರಂಗ ಆಗಿತ್ತು. ಆದ್ರೆ ಈಗ ದುಡ್ ಕೊಟ್ರೆ ಮಾಸ್ ಕಾಪಿಗೆ ಸಿಬ್ಬಂದಿಯೇ ಅವಕಾಶ ಕೊಡುತ್ತಾರೆ ಅನ್ನೋ ರಹಸ್ಯ ಬೆಳಕಿಗೆ ಬಂದಿದೆ. 
 

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ. ಸದಾ ಒಂದಿಲ್ಲೊಂದು ಕಾಂಟ್ರವರ್ಸಿ, ಕರ್ಮಕಾಂಡಕ್ಕೆ ಸುದ್ದಿಯಾಗುತ್ತಿರುತ್ತೆ. ವಿದ್ಯಾರ್ಥಿಗಳ ಪಾಲಿಗೆ ವರ ಆಗಬೇಕಿದ್ದ ಮೈಸೂರಿನ(Mysore) ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯ ಅವರ ಪಾಲಿನ ಉರುಳಾಗಿ ಬೆಳೆದಿದೆ. ಜ್ಞಾನಾರ್ಜನೆಗೆ ಬರುವ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ನೀಡದೆ, ಅಕ್ರಮಗಳನ್ನು ನಡೆಸಿ ಪ್ರಾಮಾಣಿಕ ವಿದ್ಯಾರ್ಥಿಗಳ ಪಾಲಿಗೆ ಶಾಪವಾಗ್ತಿದೆ. ಇದು ಪ್ರಾಮಾಣಿಕ ವಿದ್ಯಾರ್ಥಿಯೊಬ್ಬ(Student) ವಿವಿ ಪ್ರಾಧ್ಯಾಪಕರಿಗೆ ಪೋನ್ ಮಾಡಿ ಗೋಳಾಡಿದ ಆಡಿಯೋ. ವಿವಿಯ ಸಹಾಯಕ ಪ್ರಾಧ್ಯಾಪಕ ಜಗದೀಶ್ ಬಾಬು ಹಾಗೂ ಚಿತ್ರದುರ್ಗ ಮೂಲದ ವಿದ್ಯಾರ್ಥಿಯ ಸಂಭಾಷಣೆಯಲ್ಲಿ ಮಂಡ್ಯ, ಚಿತ್ರದುರ್ಗ, ದಾವಣಗೆರೆಯ (Davanagere)ಪರೀಕ್ಷಾ ಕೇಂದ್ರಗಳ ಲಂಚಾವತಾರ ಬಿಚ್ಚಿಟ್ಟಿದ್ದಾರೆ . ಕಳೆದ ಸೆಮಿಸ್ಟರ್ ಬಹುತೇಕ ಪರೀಕ್ಷೆಗಳಲ್ಲಿ‌ ಮಾಸ್ ಕಾಫಿ ನಡೆದಿದ್ದು, ಒಂದು ಸಾವಿರ ಕೊಟ್ಟರೆ ಎಂ,ಎ ಹಾಗೂ ಎಂ.ಕಾಂ ಪರೀಕ್ಷೆಗಳಲ್ಲಿ ಹಾಗೂ ಒಂದುವರೆ ಸಾವಿರ ಕೊಟ್ಟರೆ ಎಂ.ಎಸ್ಸಿ ಪರೀಕ್ಷೆಗಳನ್ನು ಕಾಪಿ ಮಾಡಬಹುದಂತೆ. ದುಡ್ಡು ಕೊಡಲಿಲ್ಲ ಅಂದ್ರೆ ಸಪರೇಟ್ ರೂಂ ನಲ್ಲಿ ಸ್ಟ್ರಿಕ್ಟ್ ಆಗಿ ಪರೀಕ್ಷೆ ಬರೆಸ್ತಾರೆ ಎಂದು ವಿದ್ಯಾರ್ಥಿ ಆರೋಪಿಸಿದ್ದಾನೆ. ಕರ್ನಾಟಕ ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ವರವಾಗಲಿ ಎಂದು ಸ್ಥಾಪನೆಯಾಗಿದೆ. ಆದ್ರಿಲ್ಲಿ ಸಿಬ್ಬಂದಿಗಳು ತಮ್ಮ ಆರ್ಥಿಕತೆಗೆ ಅನುಕೂಲವಾಗುವಂತೆ ಬಳಸಿಕೊಳ್ಳುವಂತೆ ಕಾಣ್ತಿದೆ. ರಾಜ್ಯ ಸರ್ಕಾರ ಮಧ್ಯ ಪ್ರವೆಶ ಮಾಡಿ ಈ ಕರ್ಮಕಾಂಡಕ್ಕೆ ಬ್ರೇಕ್ ಹಾಕಬೇಕಿದೆ.

ಇದನ್ನೂ ವೀಕ್ಷಿಸಿ:  Today Horoscope: ಮೇಷದಿಂದ ಮೀನ- ಯಾವ ರಾಶಿಯವರಿಗೆ ಏನುಫಲ ? ನೀವು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳೇನು ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more