ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

Suvarna News   | Asianet News
Published : May 07, 2020, 06:58 PM IST

ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. 

ಶಿವಮೊಗ್ಗ(ಮೇ.07): ಕೊರೋನಾ ವೈರಸ್ ಜನಜೀವನದ ಮೇಲೆ ಭೀಕರ ಪರಿಣಾಮವನ್ನೇ ಬೀರಿದೆ. ದೇಶಾದ್ಯಂತ ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ಇದ್ದವರೆಲ್ಲರೂ ಊರು ಸೇರುಕೊಂಡಿದ್ದಾರೆ. ಊರಿಗೆ ಬಂದ ಹಲವರು ಮೊಬೈಲ್ ಹಿಡಿದುಕೊಂಡು ಟೈಂ ಪಾಸ್ ಮಾಡುತ್ತಿದ್ದಾರೆ.

ಇಂತವರ ನಡುವೆ ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. ಐಟಿ-ಬಿಟಿ ಯಲಿ ಕೆಲಸ ಮಾಡ್ತಿದ್ರು ಕೃಷಿ ಕಾಯಕ ಮರ್ತಿಲ್ಲ. ಸಮಯ ವ್ಯರ್ಥ ಮಾಡೋ ಜನ್ರ ಮಧ್ಯೆ ಈ ಟೆಕ್ಕಿ ತುಂಬ ಭಿನ್ನವಾಗಿ ನಿಲ್ತಾರೆ.

ಮಹಾದೇವಪುರ ಬಾಗ್ಮನೆ ಟೆಕ್ ಪಾರ್ಕ್ ನ ಡೆಲ್ ಇಎಂಸಿ ಯಲ್ಲಿ ಕೆಲಸ ಮಾಡಿಕೊಂಡಿದ್ದ ಟೆಕ್ಕಿ ಇದೀಗ ಯಾವ ರೈತನಿಗೂ ಕಡಿಮೆಯಿಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಟೆಕ್ಕಿ ಮನೆಯವರು 70 ಕ್ವಿಂಟಾಲ್ ಜೋಳ ಬೆಳೆದಿದ್ದು, ಇದೀಗ ಶುಂಠಿ ಬಿತ್ತನೆ ಮಾಡಿದ್ದಾರೆ. ಮನೆಯವರ ಜತೆ ಟೆಕ್ಕಿ ಹೆಗಲಿಗೆ ಹೆಗಲುಕೊಟ್ಟು ದುಡಿಯುತ್ತಿದ್ದಾರೆ. ಈ ಕುರಿತಾದ ಒಂದು ಝಲಕ್ ಇಲ್ಲಿದೆ ನೋಡಿ.
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್