ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

Published : Jun 01, 2020, 11:34 AM IST

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಶಿವಮೊಗ್ಗ(ಜೂ.01): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಗಣನೀಯ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದರೆ ಮತ್ತೊಂದೆಡೆ ಕೊರೋನಾ ವಾರಿಯರ್ಸ್‌ಗೆ ಡೆಡ್ಲಿ ಹೆಮ್ಮಾರಿ ವಕ್ಕರಿಸಿರುವುದು ಜಿಲ್ಲೆಯ ಜನರ ಆತಂಕಕ್ಕೀಡು ಮಾಡಿಕೊಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಇನ್ನು ಕೊರೋನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಆಯನೂರು ಆರೋಗ್ಯ ಕೇಂದ್ರದ ವೈದ್ಯೆಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.  ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯೆ  ಕೂಡಾ ಕ್ವಾರಂಟೈನ್‌ನಲ್ಲಿದ್ದರು.ಇದೀಗ ಆಯನೂರು ವೈದ್ಯೆ ಕೂಡಾ ಕೊರೋನಾ ದಾಳಿಗೆ ತುತ್ತಾಗಿದ್ದಾರೆ.

ಇಷ್ಟುದಿನ ಹೊರರಾಜ್ಯಗಳಿಂದ ಬಂದಂತವರಿಗೆ ಹಾಗೂ ಜನಸಾಮಾನ್ಯರಿಗೆ ಕೊರೋನಾ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ ಕೊರೋನಾ ವಾರಿಯರ್ಸ್‌ಗಳಿಗೆ ಸೋಂಕು ದಾಳಿ ಮಾಡಿರುವುದು ಮಲೆನಾಡಿನ ಮಂದಿಯ ನಿದ್ದೆಗೆಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!