ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

Suvarna News   | Asianet News
Published : Jun 01, 2020, 11:34 AM IST

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಶಿವಮೊಗ್ಗ(ಜೂ.01): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಗಣನೀಯ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದರೆ ಮತ್ತೊಂದೆಡೆ ಕೊರೋನಾ ವಾರಿಯರ್ಸ್‌ಗೆ ಡೆಡ್ಲಿ ಹೆಮ್ಮಾರಿ ವಕ್ಕರಿಸಿರುವುದು ಜಿಲ್ಲೆಯ ಜನರ ಆತಂಕಕ್ಕೀಡು ಮಾಡಿಕೊಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಇನ್ನು ಕೊರೋನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಆಯನೂರು ಆರೋಗ್ಯ ಕೇಂದ್ರದ ವೈದ್ಯೆಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.  ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯೆ  ಕೂಡಾ ಕ್ವಾರಂಟೈನ್‌ನಲ್ಲಿದ್ದರು.ಇದೀಗ ಆಯನೂರು ವೈದ್ಯೆ ಕೂಡಾ ಕೊರೋನಾ ದಾಳಿಗೆ ತುತ್ತಾಗಿದ್ದಾರೆ.

ಇಷ್ಟುದಿನ ಹೊರರಾಜ್ಯಗಳಿಂದ ಬಂದಂತವರಿಗೆ ಹಾಗೂ ಜನಸಾಮಾನ್ಯರಿಗೆ ಕೊರೋನಾ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ ಕೊರೋನಾ ವಾರಿಯರ್ಸ್‌ಗಳಿಗೆ ಸೋಂಕು ದಾಳಿ ಮಾಡಿರುವುದು ಮಲೆನಾಡಿನ ಮಂದಿಯ ನಿದ್ದೆಗೆಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!