ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

Suvarna News   | Asianet News
Published : Jun 01, 2020, 11:34 AM IST

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಶಿವಮೊಗ್ಗ(ಜೂ.01): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಗಣನೀಯ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದರೆ ಮತ್ತೊಂದೆಡೆ ಕೊರೋನಾ ವಾರಿಯರ್ಸ್‌ಗೆ ಡೆಡ್ಲಿ ಹೆಮ್ಮಾರಿ ವಕ್ಕರಿಸಿರುವುದು ಜಿಲ್ಲೆಯ ಜನರ ಆತಂಕಕ್ಕೀಡು ಮಾಡಿಕೊಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಇನ್ನು ಕೊರೋನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಆಯನೂರು ಆರೋಗ್ಯ ಕೇಂದ್ರದ ವೈದ್ಯೆಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.  ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯೆ  ಕೂಡಾ ಕ್ವಾರಂಟೈನ್‌ನಲ್ಲಿದ್ದರು.ಇದೀಗ ಆಯನೂರು ವೈದ್ಯೆ ಕೂಡಾ ಕೊರೋನಾ ದಾಳಿಗೆ ತುತ್ತಾಗಿದ್ದಾರೆ.

ಇಷ್ಟುದಿನ ಹೊರರಾಜ್ಯಗಳಿಂದ ಬಂದಂತವರಿಗೆ ಹಾಗೂ ಜನಸಾಮಾನ್ಯರಿಗೆ ಕೊರೋನಾ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ ಕೊರೋನಾ ವಾರಿಯರ್ಸ್‌ಗಳಿಗೆ ಸೋಂಕು ದಾಳಿ ಮಾಡಿರುವುದು ಮಲೆನಾಡಿನ ಮಂದಿಯ ನಿದ್ದೆಗೆಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!