ಬೆಂಗಳೂರು ಎಪಿಎಂಸಿಯಲ್ಲಿ ಭ್ರಷ್ಟಾಚಾರ..? ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು ಎಪಿಎಂಸಿಯಲ್ಲಿ ಭ್ರಷ್ಟಾಚಾರ..? ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಕೆ

Published : Nov 12, 2023, 11:08 AM IST

ರಾಜ್ಯದ ದೊಡ್ಡ ಎಪಿಎಂಸಿ ಮಾರುಕಟ್ಟೆಗಳಲ್ಲಿ  ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆ ಸಹ ಒಂದು. ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೈತರು, ವರ್ತಕರು ತಮ್ಮ ವ್ಯವಹಾರವನ್ನ ಇದೇ ಮಾರುಕಟ್ಟೆ ಮೂಲಕ ಮಾಡ್ತಾರೆ.‌ ಆದರೆ ಈಗ ಇದೇ ಮಾರುಕಟ್ಟೆಯ ಆಡಳಿತ ಮಂಡಳಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ..ಅಷ್ಟೇ ಅಲ್ಲದೇ ರಾಜ್ಯಪಾಲರ ಬಳಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆಗಳಾದ(APMC market) ಯಶವಂತಪುರ(Yeshavantpur) ಮತ್ತು ದಾಸನಪುರ ಮಾರ್ಕೆಟ್(Dasanpur market) ಭ್ರಷ್ಟಾಚಾರ(Corruption) ತಾಂಡವವಾಡುತ್ತಿದೆಯಂತೆ . ಸೆಕ್ಯುರಿಟಿ ಗಾರ್ಡ್ ಮತ್ತು ಕಸ ಗೂಡಿಸುವವರ ಹೆಸರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರುಪಾಯಿ ಹಣವನ್ನು ಸುಳ್ಳು ಲೆಕ್ಕ ತೋರಿಸಿ ದೋಚುತ್ತಿದ್ದರಂತೆ. ಈ ರೀತಿ ಸಾಕಷ್ಟು ಸುಳ್ಳು ಲೆಕ್ಕ ತೋರಿಸಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರುಪಾಯಿ ನಷ್ಟ ಉಂಟು ಮಾಡಿರುವ  ಆರೋಪ ಕೇಳಿಬಂದಿದೆ. ಈ ಸಂಬಂಧ ಎಪಿಎಂಸಿ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಪರಮೇಶ್ ದೂರು ನೀಡಿದ್ದಾರೆ. ಇನ್ನೂ ರಾಜ್ಯಪಾಲರಿಗೆ ಸಲ್ಲಿಕೆಯಾಗಿರೋ ದೂರಿನಲ್ಲಿ ಭ್ರಷ್ಟಾಚಾರದ ಬಗ್ಗೆ ಕೃಷಿ ಉತ್ಪನ್ನ ಸಚಿವರ ಗಮನಕ್ಕಿದ್ರೂ, ಸಚಿವರು ಮಾತ್ರ ಸೈಲೆಂಟ್ ಆಗಿದ್ದಾರೆ ಎಂಬ ಆರೋಪ  ಚರ್ಚೆ ಗ್ರಾಸವಾಗಿದೆ. ನಿತ್ಯ ಲಕ್ಷಾಂತರ ರೂಪಾಯಿ ವ್ಯವಹಾರ ನಡೆಯುವ ಜಾಗದಲ್ಲಿ ಸದ್ಯ ಅಧಿಕಾರಿಗಳ ವಿರುದ್ಧ ಕೇಳಿಬಂದಿರೋ ಆರೋಪ ಗಂಭೀರವಾದದ್ದೆ. ಆದರೆ ಸದ್ಯ ಸಲ್ಲಿಕೆಯಾಗಿರೋ ದೂರಿನನ್ವಯ ರಾಜ್ಯಪಾಲರು ಯಾವ ರೀತಿ ಕ್ರಮವಹಿಸುತ್ತಾರೆ ಕಾದುನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಮಹೇಶ್ ಬಾಬು ಜೊತೆ ಶ್ರೀಲೀಲಾ ಲುಂಗಿ ಡ್ಯಾನ್ಸ್‌: ಗುಂಟೂರು ಖಾರಂ ಸಿಕ್ಕಾಪಟ್ಟೆ ಘಾಟು ನಾಟು!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more