ಬೆಂಗಳೂರು ಎಪಿಎಂಸಿಯಲ್ಲಿ ಭ್ರಷ್ಟಾಚಾರ..? ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು ಎಪಿಎಂಸಿಯಲ್ಲಿ ಭ್ರಷ್ಟಾಚಾರ..? ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಕೆ

Published : Nov 12, 2023, 11:08 AM IST

ರಾಜ್ಯದ ದೊಡ್ಡ ಎಪಿಎಂಸಿ ಮಾರುಕಟ್ಟೆಗಳಲ್ಲಿ  ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆ ಸಹ ಒಂದು. ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೈತರು, ವರ್ತಕರು ತಮ್ಮ ವ್ಯವಹಾರವನ್ನ ಇದೇ ಮಾರುಕಟ್ಟೆ ಮೂಲಕ ಮಾಡ್ತಾರೆ.‌ ಆದರೆ ಈಗ ಇದೇ ಮಾರುಕಟ್ಟೆಯ ಆಡಳಿತ ಮಂಡಳಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ..ಅಷ್ಟೇ ಅಲ್ಲದೇ ರಾಜ್ಯಪಾಲರ ಬಳಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆಗಳಾದ(APMC market) ಯಶವಂತಪುರ(Yeshavantpur) ಮತ್ತು ದಾಸನಪುರ ಮಾರ್ಕೆಟ್(Dasanpur market) ಭ್ರಷ್ಟಾಚಾರ(Corruption) ತಾಂಡವವಾಡುತ್ತಿದೆಯಂತೆ . ಸೆಕ್ಯುರಿಟಿ ಗಾರ್ಡ್ ಮತ್ತು ಕಸ ಗೂಡಿಸುವವರ ಹೆಸರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರುಪಾಯಿ ಹಣವನ್ನು ಸುಳ್ಳು ಲೆಕ್ಕ ತೋರಿಸಿ ದೋಚುತ್ತಿದ್ದರಂತೆ. ಈ ರೀತಿ ಸಾಕಷ್ಟು ಸುಳ್ಳು ಲೆಕ್ಕ ತೋರಿಸಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರುಪಾಯಿ ನಷ್ಟ ಉಂಟು ಮಾಡಿರುವ  ಆರೋಪ ಕೇಳಿಬಂದಿದೆ. ಈ ಸಂಬಂಧ ಎಪಿಎಂಸಿ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಪರಮೇಶ್ ದೂರು ನೀಡಿದ್ದಾರೆ. ಇನ್ನೂ ರಾಜ್ಯಪಾಲರಿಗೆ ಸಲ್ಲಿಕೆಯಾಗಿರೋ ದೂರಿನಲ್ಲಿ ಭ್ರಷ್ಟಾಚಾರದ ಬಗ್ಗೆ ಕೃಷಿ ಉತ್ಪನ್ನ ಸಚಿವರ ಗಮನಕ್ಕಿದ್ರೂ, ಸಚಿವರು ಮಾತ್ರ ಸೈಲೆಂಟ್ ಆಗಿದ್ದಾರೆ ಎಂಬ ಆರೋಪ  ಚರ್ಚೆ ಗ್ರಾಸವಾಗಿದೆ. ನಿತ್ಯ ಲಕ್ಷಾಂತರ ರೂಪಾಯಿ ವ್ಯವಹಾರ ನಡೆಯುವ ಜಾಗದಲ್ಲಿ ಸದ್ಯ ಅಧಿಕಾರಿಗಳ ವಿರುದ್ಧ ಕೇಳಿಬಂದಿರೋ ಆರೋಪ ಗಂಭೀರವಾದದ್ದೆ. ಆದರೆ ಸದ್ಯ ಸಲ್ಲಿಕೆಯಾಗಿರೋ ದೂರಿನನ್ವಯ ರಾಜ್ಯಪಾಲರು ಯಾವ ರೀತಿ ಕ್ರಮವಹಿಸುತ್ತಾರೆ ಕಾದುನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಮಹೇಶ್ ಬಾಬು ಜೊತೆ ಶ್ರೀಲೀಲಾ ಲುಂಗಿ ಡ್ಯಾನ್ಸ್‌: ಗುಂಟೂರು ಖಾರಂ ಸಿಕ್ಕಾಪಟ್ಟೆ ಘಾಟು ನಾಟು!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more