ಹಳೇ ವೈಷಮ್ಯಕ್ಕೆ ಬಲಿಯಾದ ಚಿನ್ನದಂತ ಫಸಲು: ಬೆಳೆದ ಬೆಳೆ ಕೈಸೇರಲಿಲ್ಲ ಎಂದು ಅನ್ನದಾತ ಅಳಲು..!

ಹಳೇ ವೈಷಮ್ಯಕ್ಕೆ ಬಲಿಯಾದ ಚಿನ್ನದಂತ ಫಸಲು: ಬೆಳೆದ ಬೆಳೆ ಕೈಸೇರಲಿಲ್ಲ ಎಂದು ಅನ್ನದಾತ ಅಳಲು..!

Published : Oct 12, 2023, 11:26 AM IST

ಸಮೃದ್ಧವಾಗಿ ಬೆಳೆದಿರೋ ಹತ್ತಿ ಬೆಳೆ.. ಸುಮಾರು 15-16 ಲಕ್ಷ ರೂ. ಖರ್ಚು ಮಾಡಿ ಬೆಳೆದಿದ್ದ  ಹತ್ತಿ ಬೆಳೆ  ಇನ್ನೇನು 1 ತಿಂಗಳು ಕಳೆದರೇ ರೈತನ  ಕೈ ಸೇರುತ್ತಿತ್ತು. ಅಷ್ಟರಲ್ಲಿಯೇ ಕುರ್ಡಿ ಗ್ರಾಮದ ಅಬ್ರಾಹಮಪ್ಪ ಎಂಬಾತ 50 -60 ಜನರ ರೌಡಿಗಳನ್ನ ಕರೆದುಕೊಂಡು ಬಂದು ಜಮೀನಿಗೆ ಟ್ರ್ಯಾಕ್ಟರ್ ನುಗ್ಗಿಸಿ ಹತ್ತಿಬೆಳೆನ್ನ ನಾಶ ಮಾಡಿದ್ದಾನಂತೆ. 

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹುಲಿಗೆಪ್ಪ ಕಳೆದ 25 ವರ್ಷಗಳ ಹಿಂದೆ ಕೃಷಿ ಮಾಡಲು ಗೊಬ್ಬರ ಮತ್ತು ಕ್ರಿಮಿನಾಶಕ ತಂದಿದ್ದರಂತೆ. ಆದ್ರೆ ಅದಕ್ಕೆ ಹಣ ಕಟ್ಟಲು ಆಗದೇ ತಮ್ಮ ಜಮೀನು ಅಡವಿಟ್ಟು ಗೂಳೆ ಹೋಗಿದ್ರು. ಆ ಜಮೀನಿನಲ್ಲಿ ಅಬ್ರಾಹಮಪ್ಪ ದಬ್ಬಾಳಿಕೆಯಿಂದ ಕೃಷಿ ಮಾಡಿಕೊಂಡು ಇದ್ದ, ಈ ವರ್ಷ ಕೋರ್ಟ್ ಹುಲಿಗೆಪ್ಪನಿಗೆ ಜಮೀನು ವಾಪಸ್ ಕೊಡಿಸಿ ಆದೇಶ ನೀಡಿತ್ತು. ಹೀಗಾಗಿ ಹುಲಿಗೆಪ್ಪ ಸಹೋದರರು ಸೇರಿ ಹತ್ತಿ ಬಿತ್ತನೆ ಮಾಡಿದ್ರು. ಹತ್ತಿ ಬೆಳೆ(cotton crop) ಕೂಡ ಚೆನ್ನಾಗಿ ಬಂದಿತ್ತು.. ಆದ್ರೆ, ಈಗ ಎಲ್ಲಾ ಸರ್ವನಾಶ ಮಾಡಿದ್ದಾರೆ. ಇಡೀ ಕುಟುಂಬದ 25ಕ್ಕೂ ಹೆಚ್ಚು ಜನರು ಕೃಷಿ ಮಾಡಿ, ಬೆಳೆಯನ್ನೇ  ನಂಬಿಕೊಂಡಿದ್ರು. ಈಗ ಏಕಾಏಕಿ ಅಬ್ರಾಹಮಪ್ಪ ಹತ್ತಿ ಬೆಳೆನಾಶ ಮಾಡಿದಕ್ಕೆ ಹುಲಿಗೆಪ್ಪನ ಕುಟುಂಬಸ್ಥರು ಬೀದಿಗೆ ಬಿದ್ದಾರೆ.  ಬೆಳೆನಾಶ ಮಾಡಿದ ಅಬ್ರಾಹಮಪ್ಪನ ವಿರುದ್ಧ ಮಾನ್ವಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಕಷ್ಟಪಟ್ಟು ದುಡಿದು ಬೆಳೆದ ಬೆಳೆ ಹಾಳು ಮಾಡಿದ್ದಾರೆ. ನ್ಯಾಯ ಕೊಡಿಸಿ ಎಂದು ಹುಲಿಗೆಪ್ಪ ಕುಟುಂಬಸ್ಥರು ಪೊಲೀಸರಿಗೆ(police) ದೂರು ಕೊಟ್ಟಿದ್ದಾರೆ. ಆದ್ರೆ ಪೊಲೀಸರು ಮಾತ್ರ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಕುಟುಂಬಸ್ಥರ ಆರೋಪವಾಗಿದೆ. ಕಷ್ಟಪಟ್ಟು ಬೆಳೆದಿದ್ದ 9 ಎಕರೆ ಹತ್ತಿ ಬೆಳೆ ಸಂಪೂರ್ಣ ನಾಶ ಮಾಡಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ.

ಇದನ್ನೂ ವೀಕ್ಷಿಸಿ:  ಯಾದಗಿರಿ ರೈತರಿಗೆ 2.5 ಕೋಟಿ ಪಂಗನಾಮ: ಹತ್ತಿ ಖರೀದಿಸಿ..150 ಅನ್ನದಾತರಿಗೆ ಮೋಸ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more