ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಗ್ ರಿಲೀಫ್: ನಡ್ಡಾ ಕೇಸ್‌ಗೆ ಧಾರವಾಡ ಕೋರ್ಟ್ ಮಧ್ಯಂತರ ತಡೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಗ್ ರಿಲೀಫ್: ನಡ್ಡಾ ಕೇಸ್‌ಗೆ ಧಾರವಾಡ ಕೋರ್ಟ್ ಮಧ್ಯಂತರ ತಡೆ

Published : Oct 13, 2023, 10:48 AM IST

ವಿಧಾನಸಭೆ ಎಲೆಕ್ಷನ್ ಹೊತ್ತಲ್ಲಿ ಆಮಿಷದ ಪ್ರಚಾರ ಮಾಡಿದ್ರು  ಜೆ.ಪಿ ನಡ್ಡಾ ವಿರುದ್ಧ ಶಿಗ್ಗಾಂವಿಯಲ್ಲಿ ಕೇಸ್ ದಾಖಲಾಗಿತ್ತು. ಕ್ರಮ ಕೈಗೊಳ್ಳುವಂತೆ  ಸರ್ಕಾರಿ ಅಧಿಕಾರಿ ಮನವಿ ಮಾಡಿದ್ರು..ಈ ಕೇಸ್ ರದ್ದು ಮಾಡುವಂತೆ ನಡ್ಡಾ ಪರ ವಕೀಲರು ಧಾರವಾಡ ಹೈಕೋರ್ಟ್‌ಗೆ ಮನವಿ ಮಾಡಿದ್ರು..ವಾದ ಆಲಿಸಿದ ನ್ಯಾಯಾಲಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಗ್ ರಿಲೀಫ್ ಕೊಟ್ಟಿದೆ.
 

ಕರ್ನಾಟಕ ವಿಧಾನಸಭೆ ಎಲೆಕ್ಷನ್‌.. ಬಿಜೆಪಿ -ಕಾಂಗ್ರೆಸ್ ಪ್ರತಿಷ್ಠೆ ಮಧ್ಯೆ ಜೆಡಿಎಸ್ ಕೂಡ ಪೈಪೋಟಿಗೆ ಇಳಿದಿತ್ತು. ಹೀಗಾಗಿ ಅಂದು ಆಡಳಿತಾರೂಢ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ಅಬ್ಬರದ ಪ್ರಚಾರಕ್ಕೆ ಇಳಿದಿತ್ತು. ಬಿಜೆಪಿಯ(BJP) ಘಟಾನುಘಟಿಗಳು ಕ್ಯಾಂಪೇನ್ ಮೇಲೆ ಕ್ಯಾಂಪೇನ್ ನಡೆಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಕೂಡ ಹಲವು ಬಾರಿ ರಾಜ್ಯಕ್ಕೆ ಬಂದು ಕ್ಯಾಂಪೇನ್ ಮಾಡಿದ್ದರು. 2023ರ ಏಪ್ರಿಲ್ 19 ರಂದು  ಹಾವೇರಿಯ(Haveri) ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪರ ಭಾಷಣ ಮಾಡಿದ್ದ ನಡ್ಡಾ, ಕರ್ನಾಟಕದ ಮೇಲೆ ಪ್ರಧಾನಿ ಮೋದಿ(Narendra Modi) ಆಶೀರ್ವಾದ ಇದೆ. ಬಿಜೆಪಿಯನ್ನ ಗೆಲ್ಲಿಸಿದ್ರೆ ಕರ್ನಾಟಕದಲ್ಲಿ ವಿಕಾಸ ಆಗುತ್ತೆ ಅಂದಿದ್ರು. ಆದ್ರೆ ಜೆಪಿ ನಡ್ಡಾ ಈ ಭಾಷಣದ ವಿರುದ್ಧ ದೂರು ದಾಖಲಾಯ್ತು. ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಸರ್ಕಾರಿ ಅಧಿಕಾರಿ ಲಕ್ಷ್ಮಣ ನಂದಿ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ರು. ಸೂಕ್ತ ಕ್ರಮ ಕೈಗೊಳ್ಳಬೇಕು ಅಂತಾ ಮನವಿ ಮಾಡಿದ್ರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಕೇಸ್ ದಾಖಲಾಗ್ತಿದ್ದಂತೆ ಇತ್ತ ನಡ್ಡಾ ಪರ ವಕೀಲರು ಧಾರವಾಡ ವಿಭಾಗಿಯ ಪೀಠದ ಮೆಟ್ಟಿಲೇರಿದ್ರು. ಮತ ಕೇಳೋದು ಪ್ರತಿಯೊಬ್ಬರ ಹಕ್ಕು, ಜೆ.ಪಿ ನಡ್ಡಾ ಕೂಡ ಅದೇ ರೀತಿಯಲ್ಲಿ ಮತಕೇಳಿದ್ದಾರೆ ಇದರಲ್ಲಿ ಪ್ರಚೋದನೆ ಇಲ್ಲ  ಪ್ರಕರಣ ರದ್ದು ಮಾಡುವಂತೆ ವಾದ ಮಂಡಿಸಿದ್ರು. ಕೊನೆಗೆ ಕೋರ್ಟ್ ಜೆಪಿ ನಡ್ಡಾಗೆ ರಿಲೀಫ್ ನೀಡಿದೆ. ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.ಜೆ.ಪಿ ನಡ್ಡಾ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್‌ನ ನಾಗಭೂಷಣ ವಿಶೇಷ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯನ್ನ ನವೆಂಬರ್ 3ಕ್ಕೆ ಮುಂದೂಡಿದ್ದು,  ಸದ್ಯ ಜೆ.ಪಿ ನಡ್ಡಾಗೆ ರಿಲೀಫ್ ಕೊಟ್ಟಿದೆ.

ಇದನ್ನೂ ವೀಕ್ಷಿಸಿ:  ಕಲ್ಪತರು ನಾಡಿಗೂ ಕಾವೇರಿ ನೀರಿನ ಸಂಕಷ್ಟ: ತುಮಕೂರಿನಲ್ಲಿ ಕುಡಿಯೋ ನೀರಿಗೆ ಹಾಹಾಕಾರ ?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more