ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಗ್ ರಿಲೀಫ್: ನಡ್ಡಾ ಕೇಸ್‌ಗೆ ಧಾರವಾಡ ಕೋರ್ಟ್ ಮಧ್ಯಂತರ ತಡೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಗ್ ರಿಲೀಫ್: ನಡ್ಡಾ ಕೇಸ್‌ಗೆ ಧಾರವಾಡ ಕೋರ್ಟ್ ಮಧ್ಯಂತರ ತಡೆ

Published : Oct 13, 2023, 10:48 AM IST

ವಿಧಾನಸಭೆ ಎಲೆಕ್ಷನ್ ಹೊತ್ತಲ್ಲಿ ಆಮಿಷದ ಪ್ರಚಾರ ಮಾಡಿದ್ರು  ಜೆ.ಪಿ ನಡ್ಡಾ ವಿರುದ್ಧ ಶಿಗ್ಗಾಂವಿಯಲ್ಲಿ ಕೇಸ್ ದಾಖಲಾಗಿತ್ತು. ಕ್ರಮ ಕೈಗೊಳ್ಳುವಂತೆ  ಸರ್ಕಾರಿ ಅಧಿಕಾರಿ ಮನವಿ ಮಾಡಿದ್ರು..ಈ ಕೇಸ್ ರದ್ದು ಮಾಡುವಂತೆ ನಡ್ಡಾ ಪರ ವಕೀಲರು ಧಾರವಾಡ ಹೈಕೋರ್ಟ್‌ಗೆ ಮನವಿ ಮಾಡಿದ್ರು..ವಾದ ಆಲಿಸಿದ ನ್ಯಾಯಾಲಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಗ್ ರಿಲೀಫ್ ಕೊಟ್ಟಿದೆ.
 

ಕರ್ನಾಟಕ ವಿಧಾನಸಭೆ ಎಲೆಕ್ಷನ್‌.. ಬಿಜೆಪಿ -ಕಾಂಗ್ರೆಸ್ ಪ್ರತಿಷ್ಠೆ ಮಧ್ಯೆ ಜೆಡಿಎಸ್ ಕೂಡ ಪೈಪೋಟಿಗೆ ಇಳಿದಿತ್ತು. ಹೀಗಾಗಿ ಅಂದು ಆಡಳಿತಾರೂಢ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ಅಬ್ಬರದ ಪ್ರಚಾರಕ್ಕೆ ಇಳಿದಿತ್ತು. ಬಿಜೆಪಿಯ(BJP) ಘಟಾನುಘಟಿಗಳು ಕ್ಯಾಂಪೇನ್ ಮೇಲೆ ಕ್ಯಾಂಪೇನ್ ನಡೆಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಕೂಡ ಹಲವು ಬಾರಿ ರಾಜ್ಯಕ್ಕೆ ಬಂದು ಕ್ಯಾಂಪೇನ್ ಮಾಡಿದ್ದರು. 2023ರ ಏಪ್ರಿಲ್ 19 ರಂದು  ಹಾವೇರಿಯ(Haveri) ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪರ ಭಾಷಣ ಮಾಡಿದ್ದ ನಡ್ಡಾ, ಕರ್ನಾಟಕದ ಮೇಲೆ ಪ್ರಧಾನಿ ಮೋದಿ(Narendra Modi) ಆಶೀರ್ವಾದ ಇದೆ. ಬಿಜೆಪಿಯನ್ನ ಗೆಲ್ಲಿಸಿದ್ರೆ ಕರ್ನಾಟಕದಲ್ಲಿ ವಿಕಾಸ ಆಗುತ್ತೆ ಅಂದಿದ್ರು. ಆದ್ರೆ ಜೆಪಿ ನಡ್ಡಾ ಈ ಭಾಷಣದ ವಿರುದ್ಧ ದೂರು ದಾಖಲಾಯ್ತು. ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಸರ್ಕಾರಿ ಅಧಿಕಾರಿ ಲಕ್ಷ್ಮಣ ನಂದಿ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ರು. ಸೂಕ್ತ ಕ್ರಮ ಕೈಗೊಳ್ಳಬೇಕು ಅಂತಾ ಮನವಿ ಮಾಡಿದ್ರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಕೇಸ್ ದಾಖಲಾಗ್ತಿದ್ದಂತೆ ಇತ್ತ ನಡ್ಡಾ ಪರ ವಕೀಲರು ಧಾರವಾಡ ವಿಭಾಗಿಯ ಪೀಠದ ಮೆಟ್ಟಿಲೇರಿದ್ರು. ಮತ ಕೇಳೋದು ಪ್ರತಿಯೊಬ್ಬರ ಹಕ್ಕು, ಜೆ.ಪಿ ನಡ್ಡಾ ಕೂಡ ಅದೇ ರೀತಿಯಲ್ಲಿ ಮತಕೇಳಿದ್ದಾರೆ ಇದರಲ್ಲಿ ಪ್ರಚೋದನೆ ಇಲ್ಲ  ಪ್ರಕರಣ ರದ್ದು ಮಾಡುವಂತೆ ವಾದ ಮಂಡಿಸಿದ್ರು. ಕೊನೆಗೆ ಕೋರ್ಟ್ ಜೆಪಿ ನಡ್ಡಾಗೆ ರಿಲೀಫ್ ನೀಡಿದೆ. ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.ಜೆ.ಪಿ ನಡ್ಡಾ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್‌ನ ನಾಗಭೂಷಣ ವಿಶೇಷ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯನ್ನ ನವೆಂಬರ್ 3ಕ್ಕೆ ಮುಂದೂಡಿದ್ದು,  ಸದ್ಯ ಜೆ.ಪಿ ನಡ್ಡಾಗೆ ರಿಲೀಫ್ ಕೊಟ್ಟಿದೆ.

ಇದನ್ನೂ ವೀಕ್ಷಿಸಿ:  ಕಲ್ಪತರು ನಾಡಿಗೂ ಕಾವೇರಿ ನೀರಿನ ಸಂಕಷ್ಟ: ತುಮಕೂರಿನಲ್ಲಿ ಕುಡಿಯೋ ನೀರಿಗೆ ಹಾಹಾಕಾರ ?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more