ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಗ್ ರಿಲೀಫ್: ನಡ್ಡಾ ಕೇಸ್‌ಗೆ ಧಾರವಾಡ ಕೋರ್ಟ್ ಮಧ್ಯಂತರ ತಡೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಗ್ ರಿಲೀಫ್: ನಡ್ಡಾ ಕೇಸ್‌ಗೆ ಧಾರವಾಡ ಕೋರ್ಟ್ ಮಧ್ಯಂತರ ತಡೆ

Published : Oct 13, 2023, 10:48 AM IST

ವಿಧಾನಸಭೆ ಎಲೆಕ್ಷನ್ ಹೊತ್ತಲ್ಲಿ ಆಮಿಷದ ಪ್ರಚಾರ ಮಾಡಿದ್ರು  ಜೆ.ಪಿ ನಡ್ಡಾ ವಿರುದ್ಧ ಶಿಗ್ಗಾಂವಿಯಲ್ಲಿ ಕೇಸ್ ದಾಖಲಾಗಿತ್ತು. ಕ್ರಮ ಕೈಗೊಳ್ಳುವಂತೆ  ಸರ್ಕಾರಿ ಅಧಿಕಾರಿ ಮನವಿ ಮಾಡಿದ್ರು..ಈ ಕೇಸ್ ರದ್ದು ಮಾಡುವಂತೆ ನಡ್ಡಾ ಪರ ವಕೀಲರು ಧಾರವಾಡ ಹೈಕೋರ್ಟ್‌ಗೆ ಮನವಿ ಮಾಡಿದ್ರು..ವಾದ ಆಲಿಸಿದ ನ್ಯಾಯಾಲಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಗ್ ರಿಲೀಫ್ ಕೊಟ್ಟಿದೆ.
 

ಕರ್ನಾಟಕ ವಿಧಾನಸಭೆ ಎಲೆಕ್ಷನ್‌.. ಬಿಜೆಪಿ -ಕಾಂಗ್ರೆಸ್ ಪ್ರತಿಷ್ಠೆ ಮಧ್ಯೆ ಜೆಡಿಎಸ್ ಕೂಡ ಪೈಪೋಟಿಗೆ ಇಳಿದಿತ್ತು. ಹೀಗಾಗಿ ಅಂದು ಆಡಳಿತಾರೂಢ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ಅಬ್ಬರದ ಪ್ರಚಾರಕ್ಕೆ ಇಳಿದಿತ್ತು. ಬಿಜೆಪಿಯ(BJP) ಘಟಾನುಘಟಿಗಳು ಕ್ಯಾಂಪೇನ್ ಮೇಲೆ ಕ್ಯಾಂಪೇನ್ ನಡೆಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಕೂಡ ಹಲವು ಬಾರಿ ರಾಜ್ಯಕ್ಕೆ ಬಂದು ಕ್ಯಾಂಪೇನ್ ಮಾಡಿದ್ದರು. 2023ರ ಏಪ್ರಿಲ್ 19 ರಂದು  ಹಾವೇರಿಯ(Haveri) ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪರ ಭಾಷಣ ಮಾಡಿದ್ದ ನಡ್ಡಾ, ಕರ್ನಾಟಕದ ಮೇಲೆ ಪ್ರಧಾನಿ ಮೋದಿ(Narendra Modi) ಆಶೀರ್ವಾದ ಇದೆ. ಬಿಜೆಪಿಯನ್ನ ಗೆಲ್ಲಿಸಿದ್ರೆ ಕರ್ನಾಟಕದಲ್ಲಿ ವಿಕಾಸ ಆಗುತ್ತೆ ಅಂದಿದ್ರು. ಆದ್ರೆ ಜೆಪಿ ನಡ್ಡಾ ಈ ಭಾಷಣದ ವಿರುದ್ಧ ದೂರು ದಾಖಲಾಯ್ತು. ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಸರ್ಕಾರಿ ಅಧಿಕಾರಿ ಲಕ್ಷ್ಮಣ ನಂದಿ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ರು. ಸೂಕ್ತ ಕ್ರಮ ಕೈಗೊಳ್ಳಬೇಕು ಅಂತಾ ಮನವಿ ಮಾಡಿದ್ರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಕೇಸ್ ದಾಖಲಾಗ್ತಿದ್ದಂತೆ ಇತ್ತ ನಡ್ಡಾ ಪರ ವಕೀಲರು ಧಾರವಾಡ ವಿಭಾಗಿಯ ಪೀಠದ ಮೆಟ್ಟಿಲೇರಿದ್ರು. ಮತ ಕೇಳೋದು ಪ್ರತಿಯೊಬ್ಬರ ಹಕ್ಕು, ಜೆ.ಪಿ ನಡ್ಡಾ ಕೂಡ ಅದೇ ರೀತಿಯಲ್ಲಿ ಮತಕೇಳಿದ್ದಾರೆ ಇದರಲ್ಲಿ ಪ್ರಚೋದನೆ ಇಲ್ಲ  ಪ್ರಕರಣ ರದ್ದು ಮಾಡುವಂತೆ ವಾದ ಮಂಡಿಸಿದ್ರು. ಕೊನೆಗೆ ಕೋರ್ಟ್ ಜೆಪಿ ನಡ್ಡಾಗೆ ರಿಲೀಫ್ ನೀಡಿದೆ. ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.ಜೆ.ಪಿ ನಡ್ಡಾ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್‌ನ ನಾಗಭೂಷಣ ವಿಶೇಷ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯನ್ನ ನವೆಂಬರ್ 3ಕ್ಕೆ ಮುಂದೂಡಿದ್ದು,  ಸದ್ಯ ಜೆ.ಪಿ ನಡ್ಡಾಗೆ ರಿಲೀಫ್ ಕೊಟ್ಟಿದೆ.

ಇದನ್ನೂ ವೀಕ್ಷಿಸಿ:  ಕಲ್ಪತರು ನಾಡಿಗೂ ಕಾವೇರಿ ನೀರಿನ ಸಂಕಷ್ಟ: ತುಮಕೂರಿನಲ್ಲಿ ಕುಡಿಯೋ ನೀರಿಗೆ ಹಾಹಾಕಾರ ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more