Hubballi KIMS: ಮೂಲೆಗುಂಪಾದ ಕಿಯೋಸ್ಕ್‌ ಮಷಿನ್‌: ಲಕ್ಷಾಂತರ ರೂಪಾಯಿ ಹಣ ನೀರಿನಲ್ಲಿ ಹೋಮ..!

Hubballi KIMS: ಮೂಲೆಗುಂಪಾದ ಕಿಯೋಸ್ಕ್‌ ಮಷಿನ್‌: ಲಕ್ಷಾಂತರ ರೂಪಾಯಿ ಹಣ ನೀರಿನಲ್ಲಿ ಹೋಮ..!

Suvarna News   | Asianet News
Published : Feb 25, 2022, 12:27 PM ISTUpdated : Feb 25, 2022, 12:30 PM IST

*   ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ‌ಒಂದಲ್ಲೊಂದು ಅವ್ಯವಸ್ಥೆ
*   ತಾಂತ್ರಿಕ ದೋಷಗಳಿಂದ ಕಾರ್ಯನಿರ್ವಹಿಸದೆ ಬಂದ್
*   ಧಾರವಾಡದ ಐ.ಐ.ಟಿ ಕಾಲೇಜು ಸಿದ್ಧಪಡಿಸಿದ್ದ ಕಿಯೋಸ್ಕ್ 
 

ಹುಬ್ಬಳ್ಳಿ(ಫೆ.25): ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕಿಯೋಸ್ಕ್ ಮಷಿನ್‌ಗಳು ಉಪಯೋಗಕ್ಕೆ ಬಾರದ ಸ್ಥಿತಿಯನ್ನು ತಲುಪಿವೆ. ಲಕ್ಷಾಂತರ ರೂಪಾಯಿ ವೆಚ್ಚದ ಕಿಯೋಸ್ಕ್ ಮಷಿನ್‌ಗಳನ್ನು ವ್ಯಾಕ್ಸಿನ್ ರಿಜಿಸ್ಟರ್‌ಗೆ ಉಪಯೋಗಕ್ಕೆ ಬಳಸಲಾಗುತ್ತಿತ್ತು. ಆದರೆ ನಿರ್ವಹಣೆ ಕೊರತೆಯಿಂದ ಹಾಳಾಗಿ ಹೋಗಿವೆ. ಈಗಾಗಲೇ 6 ಮಷಿನ್‌ಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯು ತರಿಸಿದ್ದು, ತಾಂತ್ರಿಕ ದೋಷಗಳಿಂದ ಕಾರ್ಯನಿರ್ವಹಿಸದೆ ಬಂದ್ ಆಗಿವೆ. ಇದರಿಂದ ಲಕ್ಷಾಂತರ ರೂಪಾಯಿ ಹೊಳೆಯಲ್ಲಿ ಹೋಮ ಮಾಡಿದಂತಾಗಿದೆ.

ಇವು ಧಾರವಾಡದ ಐಐಟಿ ಕಾಲೇಜು ಸಿದ್ಧಪಡಿಸಿದ್ದ ಕಿಯೋಸ್ಕ್ ಮಷಿನ್‌ಗಳು. ಕಿಮ್ಸ್‌ಗೆ ಬಂದ ಕೆಲವೇ ದಿನಗಳಲ್ಲೇ ಕೆಟ್ಟು ನಿಂತಿವೆ. ಕೇಂದ್ರ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ಸಿದ್ಧಪಡಿಸಿದ್ದ ಧಾರವಾಡದ ಐಐಟಿ ಈ ಮಷಿನ್ ಗಳು ವ್ಯಾಕ್ಸಿನ್‌ಗೆ ಅನುಕೂಲವಾಗಲು ಬಳಕೆಯಾಗುತ್ತಿತ್ತು. ಮೊದಲು ವ್ಯಾಕ್ಸಿನ್ ಹಾಕಿಸಿಕೊಳ್ಳುವವರ ಹೆಸರು, ಆಧಾರ್ ನಂಬರ್, ವಯಸ್ಸು ರಿಜಿಸ್ಟರ್ ಮಾಡಿದರೆ ಸಾಕು ಅವರ ಇತಿಹಾಸವೇ ಕಿಯೋಸ್ಕ್‌ನಲ್ಲಿ ಬರುತ್ತಿತ್ತು. ಇದರಿಂದ ವ್ಯಾಕ್ಸಿನ್ ಹಾಕುವ ಆರೋಗ್ಯ ಸಿಬ್ಬಂದಿಗೆ ಸಮಯದ ಉಳಿತಾಯವಾಗುತ್ತಿತ್ತು. ಅಲ್ಲದೆ ಸಾರ್ವಜನಿಕರಿಗೆ ಘಂಟೆಗಟ್ಟಲೇ ಕಾಯುವ ಅವಶ್ಯಕತೆ ಇರುತ್ತಿರಲಿಲ್ಲ. ಆದರೆ ಪ್ರಸ್ತುತವಾಗಿ ಕಿಯೋಸ್ಕ್ ಮಷಿನ್‌ಗಳು ಉಪಯೋಗಕ್ಕೆ ಬಾರದೆ ಧೂಳು ತಿನ್ನುತ್ತಿವೆ.

Russia Ukraine Crisis: ಉಕ್ರೇನ್‌ನಲ್ಲಿರುವ ರಾಜ್ಯದ ಯಾರಿಗೂ ತೊಂದರೆಯಾಗಿಲ್ಲ: ಸಿಎಂ ಬೊಮ್ಮಾಯಿ

ಕಿಮ್ಸ್ ಆಸ್ಪತ್ರೆಯಲ್ಲಿ ಈ ರೀತಿಯ ಲಕ್ಷಾಂತರ ರೂಪಾಯಿ ಮಷಿನರಿಗಳು ಧೂಳು ತಿನ್ನುತಿರೋದು ಇದೇ ಮೊದಲಲ್ಲ.. ಈ ಹಿಂದೆ ಕೊವಿಡ್ ತುರ್ತು ಸಂದರ್ಭದಲ್ಲಿ ತರಿಸಿದ್ದ ವೆಂಟಿಲೇಟರ್, ಬೆಡ್‌ಗಳು ಸಹ ಧೂಳು ತಿನ್ನುತ್ತಿವೆ. ಅಷ್ಟೇ ಅಲ್ಲದೇ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸುಸಜ್ಜಿತ ನಿರ್ಮಿಸಿದ್ದ ಕೊವಿಡ್ ಕೇರ್ ಸೆಂಟರ್ ಸಹ ಪಾರಿವಾಳಗಳ ಗೂಡಾಗಿ ಪರಿಣಮಿಸಿದ್ದನ್ನು ಸುವರ್ಣ ನ್ಯೂಸ್ ಈ ಹಿಂದೆ ತೋರಿಸಿತ್ತು.‌ 

ಒಟ್ಟಿನಲ್ಲಿ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಮಷಿನ್ ತಂದರೂ ಉಪಯೋಗಕ್ಕೆ ಬಾರದಂತಾಗಿದ್ದು, ವಿಪರ್ಯಾಸಕರ ಸಂಗತಿಯಾಗಿದೆ. ಇನ್ನಾದರೂ ಕಿಮ್ಸ್ ಹಾಗೂ ಜಿಲ್ಲಾಡಳಿತ ಸೂಕ್ತ ನಿರ್ವಹಣೆ ವ್ಯವಸ್ಥೆ ಮೂಲಕ ಹಾಳಾಗಿ ಹೋಗುವ ಸಂಪನ್ಮೂಲಗಳ ಸದ್ಬಳಕೆ ಮಾಡಬೇಕಿದೆ.
 

23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
Read more