Hubballi-Dharwad: ಕರೆ ಮಾಡಿದ್ರೆ, ಕೋವಿಡ್ ರೋಗಿಗಳ ಮನೆ ಬಾಗಿಲಿಗೆ ಕೋವಿಡ್ ಕಿಟ್

Hubballi-Dharwad: ಕರೆ ಮಾಡಿದ್ರೆ, ಕೋವಿಡ್ ರೋಗಿಗಳ ಮನೆ ಬಾಗಿಲಿಗೆ ಕೋವಿಡ್ ಕಿಟ್

Suvarna News   | Asianet News
Published : Jan 28, 2022, 05:23 PM IST

- ಕೋವಿಡ್ ರೋಗಿಗಳ ಮನೆ ಬಾಗಿಲಿಗೆ ಕೋವಿಡ್ ಕಿಟ್ ವಿತರಣೆ 

- ವಿನೂತನ ಪ್ಲಾನ್ ಮಾಡಿದ ಪಾಲಿಕೆ ಕಮಿಷನರ್ ಗೋಪಾಲಕೃಷ್ಣ

-ಹೋಮ್ ಐಸೂಲೇಶನ್ ನಂಬರ್: 08362213803, 9141051611 
 

ಧಾರವಾಡ (ಜ. 28): ರಾಜ್ಯದಲ್ಲಿ ದಿನೆ ದಿನೆ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಎರಡು ಅಲೆಯಲ್ಲಿ ಕೊರೊನಾ ರೋಗಿಗಳು ಅನುಭವಿಸಿದ ತೊಂದರೆಯನ್ನು ಮತ್ತೆ ಅನುಭವಿಸಬಾರದು ಎಂದು ಹುಬ್ಬಳ್ಳಿ-ಧಾರವಾಡ (Hubballi Dharwad) ಮಹಾನಗರ ಪಾಲಿಕೆಯ ಕಮಿಷನರ್ ಆರ್ ಗೋಪಾಲಕೃಷ್ಣ ಸೋಂಕಿತರ ಮನೆ ಬಾಗಿಲಿಗೆ ಔಷಧಿಯನ್ನ ತಲುಪಿಸುವ ವಿನೂತನ ಕಾರ್ಯಕ್ರಮವನ್ನ  ರೂಪಿಸಿದ್ದಾರೆ. 

ಧಾರವಾಡ ಹುಬ್ಬಳ್ಳಿ ಅವಳಿ ನಗರದಲ್ಲಿ ದಿನೆ ದಿನೇ ಕೊರೊನಾ ಕೇಸ್‌ಗಳು ಹೆಚ್ಚುತ್ತಿವೆ. ಅದರಲ್ಲಿ ಎರಡನೇ ಅಲೆಗಿಂತ ಮೂರನೇಯ ಅಲೆಯಲ್ಲಿ ಶೇ 90 ರಷ್ಡು ಜನರು ‌ಹೋಂ ಐಶೋಲೇಶನಲ್ಲಿ‌ದ್ದಾರೆ. ಅವರೆಲ್ಲರಿಗೂ ಮನೆ ಮನೆಗೆ ಔಷಧಿ ಕಿಟ್ ಕೊಡಲು ಅವಳಿ‌ನಗರದ 12 ಝೋನಲ್ ಕಚೇರಿಯಲ್ಲಿ ಪ್ರತಿ ಝೋನ್‌ಗೆ ಎರಡು ವಾಹನದಂತೆ, 25 ವಾಹನಗಳನ್ನ ಪಡೆದುಕೊಂಡಿದ್ದಾರೆ.‌ ಒಂದು ವಾಹನದಲ್ಲಿ ಮೂವರು ಸಿಬ್ಬಂದಿಗಳನ್ನ ನೇಮಕ ಮಾಡಿದ್ದಾರೆ. ಯಾರೇ ಕೋವಿಡ್ ಪೇಶಂಟ್‌ಗಳು ನಿಗದಿಪಡಿಸಿದ ನಂಬರ್‌ಗಳಿಗೆ ಕರೆ ಮಾಡಿದರೆ ಸಾಕು ಮನೆ ಬಾಗಿಲಿಗೆ ತೆರಳಿ ಕಿಟ್ ನೀಡುತ್ತಿದ್ದಾರೆ. ಇನ್ನು ಈ ಯೋಜನೆಯ ವೆಚ್ಚವನ್ನ ಪಾಲಿಕೆ ಮತ್ತು ಜಿಲ್ಲಾಡಳಿತ ಭರಿಸಲಿದೆ ಎಂದು ಹೇಳ್ತಾರೆ ಕಮಿಷನರ್ ಗೋಪಾಲಕೃಷ್ಣ.

ದಿನದ 24 ಘಂಟೆಗಳಲ್ಲಿ ಕಂಟ್ರೋಲ್ ರೂಂಗೆ ಕರೆ ಮಾಡಿದರೆ ಸಾಕು,  ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಔಷಧಿಯನ್ನ ಕೊಡಲು ಸಜ್ಜಾಗಿದ್ದಾರೆ. ಈಗಾಗಲೆ‌ ಎರಡು ಅಲೆಯಲ್ಲಿ ಕೊವಿಡ್ ಕಿಟ್ ಗಾಗಿ ಜನಸಾಮಾನ್ಯರು ತುಂಬಾ ತೊಂದರೆಯನ್ನು ಅನುಭವಿಸಿದ್ರು. ಆದರೆ ಈ ತೊಂದರೆಯನ್ನ ಮೂರನೇಯ ಅಲೆಯಲ್ಲಿ ಅನುಭವಿಸಬಾರದು ಎಂದು ಕಮಿಷನರ್ ಅವರು ಸಹಾಯವಾಣಿ ಆರಂಭಿಸಿದ್ದಾರೆ. ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕಮಿಷನರ್ ವ್ಯಾಪ್ತಿಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕೆಲಸವನ್ನ ಮಾಡುತ್ತಿದೆ. ಜನರು ಕೂಡಾ ಈ ವಿನೂತನ ಯೋಜನೆಯನ್ನ ಸದುಪಯೋಗಪಡಿಸಿಕ್ಕೋಳ್ಳಬೇಕು ಅಂತಾರೆ ಸ್ಥಳಿಯ ನಿವಾಸಿಗಳು. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more