ನಾಡಿನೆಲ್ಲೆಡೆ ಬೆಳಕಿನ ಹಬ್ಬದ ಸಂಭ್ರಮ: ಮಾರುಕಟ್ಟೆಗೆ ಲಗ್ಗೆ ಇಟ್ಟ ಸಗಣಿ ದೀಪಗಳು

ನಾಡಿನೆಲ್ಲೆಡೆ ಬೆಳಕಿನ ಹಬ್ಬದ ಸಂಭ್ರಮ: ಮಾರುಕಟ್ಟೆಗೆ ಲಗ್ಗೆ ಇಟ್ಟ ಸಗಣಿ ದೀಪಗಳು

Published : Nov 14, 2023, 11:00 AM IST

ರಾಜ್ಯದೆಲ್ಲೆಡೆ ದೀಪಾವಳಿ ಹಬ್ಬ ಕಳೆಗಟ್ಟಿದೆ. ಪ್ರತೀ ವರ್ಷ ಮಾರುಕಟ್ಟೆಗೆ ಬಗೆ ಬಗೆಯ ದೀಪಗಳು ಲಗ್ಗೆಯಿಡ್ತಿದ್ರೆ ಈ ಬಾರಿ ಸಗಣಿ ದೀಪ ಎಲ್ಲರ ಮನೆಯಲ್ಲೂ ಬೆಳಗುತ್ತಿದೆ. 
 


ಗುಂಪು ಗುಂಪಾಗಿ ಕುಳಿತು ದೀಪಗಳ ತಯಾರಿಯಲ್ಲಿ ನಿರತರಾಗಿರೋ ಮಹಿಳೆಯರು. ದೀಪಗಳ ತಯಾರಿಯನ್ನ ಕುತೂಹಲದಿಂದ ನೋಡ್ತಿರೋ ಜನ. ಮತ್ತೊಂದೆಡೆ ಸಿದ್ಧವಾಗಿರೋ ದೀಪಗಳನ್ನ(Deepas) ಖರೀದಿ ಮಾಡ್ತಿರೋ ಸಾರ್ವಜನಿಕರು. ಈ ದೃಶ್ಯ ಕಂಡುಬಂದಿದ್ದು ದೊಡ್ಡಬಳ್ಳಾಪುರದಲ್ಲಿ(Doddaballapura). ಬೆಳಕಿನ ಹಬ್ಬ ದೀಪಾವಳಿ ಆಚರಣೆ (Deepavali celebration)ಜೋರಾಗಿದೆ. ದೀಪಾವಳಿ ಹಬ್ಬಕ್ಕೆಂದೇ ಮಾರುಕಟ್ಟೆಯಲ್ಲಿ ತರಹೇವಾರಿ ದೀಪಗಳು ಲಗ್ಗೆ ಇಟ್ಟಿವೆ. ಈ ಬಾರಿ ಮಣ್ಣಿನ ದೀಪಗಳ ಬದಲಿಗೆ ಸಗಣಿ ದೀಪಗಳು ಮಾರುಕಟ್ಟೆಗೆ ಬಂದಿದ್ದು, ಸಗಣಿ ದೀಪ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ರಾಷ್ಟ್ರೋತ್ಥಾನ ಗೋ ಶಾಲೆಯಲ್ಲಿ(Rashtrothana Goshala) ಸಗಣಿ ದೀಪಗಳನ್ನ ತಯಾರಿಸಲಾಗ್ತಿದೆ. ಸಗಣಿ ದೀಪ ತಯಾರಿಸಿ ಅದನ್ನು 3 ದಿನ ಬಿಸಿಲಿನಲ್ಲಿ ಒಣಗಿಸಿ ಮಾರುಕಟ್ಟೆಗೆ ಕಳಿಸಲಾಗ್ತಿದೆ. ಮಾರುಕಟ್ಟೆಗೆ ಬಂದಿರೋ ಸಗಣಿ ದೀಪ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಗಣಿ ದೀಪಗಳಿಗೆ ಸಾಕಷ್ಟು ಬೇಡಿಕೆ ಬರುತ್ತಿದೆ ಅಂತಾರೆ ಗೋಶಾಲೆ ಸಿಬ್ಬಂದಿ.ಸಗಣಿ ದೀಪ ಹಚ್ಚಿದ್ರೆ ಅದರಿಂದ ಬರುವ ಹೊಗೆ ಗಾಳಿಯ ಜತೆ ಸೇರಿ ಗಾಳಿ ಶುದ್ಧವಾಗುತ್ತಂತೆ. ಜೊತೆಗೆ ಶುದ್ಧ ಗಾಳಿಯಿಂದ ರೋಗನಿರೋಧಕ ಶಕ್ತಿಯೂ ಹೆಚ್ಚಾಗಲಿದೆ ಅಂತಾರೆ ಗೋಶಾಲೆ ಸಿಬ್ಬಂದಿ. ಸಗಣಿ ದೀಪಗಳು ಮಾರುಕಟ್ಟೆಗೆ ಲಗ್ಗೆಯಿಡ್ತಿರೋದು ಖುಷಿಯ ಸಂಗತಿ. ಸಗಣಿ ದೀಪಗಳನ್ನ ಹಚ್ಚುವ ಮೂಲಕ ಜನ ಆರೋಗ್ಯಕರ ದೀಪಾವಳಿ ಆಚರಣೆ ಮಾಡಲಿ ಅನ್ನೋದು ನಮ್ಮ ಆಶಯ.

ಇದನ್ನೂ ವೀಕ್ಷಿಸಿ:  ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more