ನಾಡಿನೆಲ್ಲೆಡೆ ಬೆಳಕಿನ ಹಬ್ಬದ ಸಂಭ್ರಮ: ಮಾರುಕಟ್ಟೆಗೆ ಲಗ್ಗೆ ಇಟ್ಟ ಸಗಣಿ ದೀಪಗಳು

ನಾಡಿನೆಲ್ಲೆಡೆ ಬೆಳಕಿನ ಹಬ್ಬದ ಸಂಭ್ರಮ: ಮಾರುಕಟ್ಟೆಗೆ ಲಗ್ಗೆ ಇಟ್ಟ ಸಗಣಿ ದೀಪಗಳು

Published : Nov 14, 2023, 11:00 AM IST

ರಾಜ್ಯದೆಲ್ಲೆಡೆ ದೀಪಾವಳಿ ಹಬ್ಬ ಕಳೆಗಟ್ಟಿದೆ. ಪ್ರತೀ ವರ್ಷ ಮಾರುಕಟ್ಟೆಗೆ ಬಗೆ ಬಗೆಯ ದೀಪಗಳು ಲಗ್ಗೆಯಿಡ್ತಿದ್ರೆ ಈ ಬಾರಿ ಸಗಣಿ ದೀಪ ಎಲ್ಲರ ಮನೆಯಲ್ಲೂ ಬೆಳಗುತ್ತಿದೆ. 
 


ಗುಂಪು ಗುಂಪಾಗಿ ಕುಳಿತು ದೀಪಗಳ ತಯಾರಿಯಲ್ಲಿ ನಿರತರಾಗಿರೋ ಮಹಿಳೆಯರು. ದೀಪಗಳ ತಯಾರಿಯನ್ನ ಕುತೂಹಲದಿಂದ ನೋಡ್ತಿರೋ ಜನ. ಮತ್ತೊಂದೆಡೆ ಸಿದ್ಧವಾಗಿರೋ ದೀಪಗಳನ್ನ(Deepas) ಖರೀದಿ ಮಾಡ್ತಿರೋ ಸಾರ್ವಜನಿಕರು. ಈ ದೃಶ್ಯ ಕಂಡುಬಂದಿದ್ದು ದೊಡ್ಡಬಳ್ಳಾಪುರದಲ್ಲಿ(Doddaballapura). ಬೆಳಕಿನ ಹಬ್ಬ ದೀಪಾವಳಿ ಆಚರಣೆ (Deepavali celebration)ಜೋರಾಗಿದೆ. ದೀಪಾವಳಿ ಹಬ್ಬಕ್ಕೆಂದೇ ಮಾರುಕಟ್ಟೆಯಲ್ಲಿ ತರಹೇವಾರಿ ದೀಪಗಳು ಲಗ್ಗೆ ಇಟ್ಟಿವೆ. ಈ ಬಾರಿ ಮಣ್ಣಿನ ದೀಪಗಳ ಬದಲಿಗೆ ಸಗಣಿ ದೀಪಗಳು ಮಾರುಕಟ್ಟೆಗೆ ಬಂದಿದ್ದು, ಸಗಣಿ ದೀಪ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ರಾಷ್ಟ್ರೋತ್ಥಾನ ಗೋ ಶಾಲೆಯಲ್ಲಿ(Rashtrothana Goshala) ಸಗಣಿ ದೀಪಗಳನ್ನ ತಯಾರಿಸಲಾಗ್ತಿದೆ. ಸಗಣಿ ದೀಪ ತಯಾರಿಸಿ ಅದನ್ನು 3 ದಿನ ಬಿಸಿಲಿನಲ್ಲಿ ಒಣಗಿಸಿ ಮಾರುಕಟ್ಟೆಗೆ ಕಳಿಸಲಾಗ್ತಿದೆ. ಮಾರುಕಟ್ಟೆಗೆ ಬಂದಿರೋ ಸಗಣಿ ದೀಪ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಗಣಿ ದೀಪಗಳಿಗೆ ಸಾಕಷ್ಟು ಬೇಡಿಕೆ ಬರುತ್ತಿದೆ ಅಂತಾರೆ ಗೋಶಾಲೆ ಸಿಬ್ಬಂದಿ.ಸಗಣಿ ದೀಪ ಹಚ್ಚಿದ್ರೆ ಅದರಿಂದ ಬರುವ ಹೊಗೆ ಗಾಳಿಯ ಜತೆ ಸೇರಿ ಗಾಳಿ ಶುದ್ಧವಾಗುತ್ತಂತೆ. ಜೊತೆಗೆ ಶುದ್ಧ ಗಾಳಿಯಿಂದ ರೋಗನಿರೋಧಕ ಶಕ್ತಿಯೂ ಹೆಚ್ಚಾಗಲಿದೆ ಅಂತಾರೆ ಗೋಶಾಲೆ ಸಿಬ್ಬಂದಿ. ಸಗಣಿ ದೀಪಗಳು ಮಾರುಕಟ್ಟೆಗೆ ಲಗ್ಗೆಯಿಡ್ತಿರೋದು ಖುಷಿಯ ಸಂಗತಿ. ಸಗಣಿ ದೀಪಗಳನ್ನ ಹಚ್ಚುವ ಮೂಲಕ ಜನ ಆರೋಗ್ಯಕರ ದೀಪಾವಳಿ ಆಚರಣೆ ಮಾಡಲಿ ಅನ್ನೋದು ನಮ್ಮ ಆಶಯ.

ಇದನ್ನೂ ವೀಕ್ಷಿಸಿ:  ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more