ನಾಡಿನೆಲ್ಲೆಡೆ ಬೆಳಕಿನ ಹಬ್ಬದ ಸಂಭ್ರಮ: ಮಾರುಕಟ್ಟೆಗೆ ಲಗ್ಗೆ ಇಟ್ಟ ಸಗಣಿ ದೀಪಗಳು

ನಾಡಿನೆಲ್ಲೆಡೆ ಬೆಳಕಿನ ಹಬ್ಬದ ಸಂಭ್ರಮ: ಮಾರುಕಟ್ಟೆಗೆ ಲಗ್ಗೆ ಇಟ್ಟ ಸಗಣಿ ದೀಪಗಳು

Published : Nov 14, 2023, 11:00 AM IST

ರಾಜ್ಯದೆಲ್ಲೆಡೆ ದೀಪಾವಳಿ ಹಬ್ಬ ಕಳೆಗಟ್ಟಿದೆ. ಪ್ರತೀ ವರ್ಷ ಮಾರುಕಟ್ಟೆಗೆ ಬಗೆ ಬಗೆಯ ದೀಪಗಳು ಲಗ್ಗೆಯಿಡ್ತಿದ್ರೆ ಈ ಬಾರಿ ಸಗಣಿ ದೀಪ ಎಲ್ಲರ ಮನೆಯಲ್ಲೂ ಬೆಳಗುತ್ತಿದೆ. 
 


ಗುಂಪು ಗುಂಪಾಗಿ ಕುಳಿತು ದೀಪಗಳ ತಯಾರಿಯಲ್ಲಿ ನಿರತರಾಗಿರೋ ಮಹಿಳೆಯರು. ದೀಪಗಳ ತಯಾರಿಯನ್ನ ಕುತೂಹಲದಿಂದ ನೋಡ್ತಿರೋ ಜನ. ಮತ್ತೊಂದೆಡೆ ಸಿದ್ಧವಾಗಿರೋ ದೀಪಗಳನ್ನ(Deepas) ಖರೀದಿ ಮಾಡ್ತಿರೋ ಸಾರ್ವಜನಿಕರು. ಈ ದೃಶ್ಯ ಕಂಡುಬಂದಿದ್ದು ದೊಡ್ಡಬಳ್ಳಾಪುರದಲ್ಲಿ(Doddaballapura). ಬೆಳಕಿನ ಹಬ್ಬ ದೀಪಾವಳಿ ಆಚರಣೆ (Deepavali celebration)ಜೋರಾಗಿದೆ. ದೀಪಾವಳಿ ಹಬ್ಬಕ್ಕೆಂದೇ ಮಾರುಕಟ್ಟೆಯಲ್ಲಿ ತರಹೇವಾರಿ ದೀಪಗಳು ಲಗ್ಗೆ ಇಟ್ಟಿವೆ. ಈ ಬಾರಿ ಮಣ್ಣಿನ ದೀಪಗಳ ಬದಲಿಗೆ ಸಗಣಿ ದೀಪಗಳು ಮಾರುಕಟ್ಟೆಗೆ ಬಂದಿದ್ದು, ಸಗಣಿ ದೀಪ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ರಾಷ್ಟ್ರೋತ್ಥಾನ ಗೋ ಶಾಲೆಯಲ್ಲಿ(Rashtrothana Goshala) ಸಗಣಿ ದೀಪಗಳನ್ನ ತಯಾರಿಸಲಾಗ್ತಿದೆ. ಸಗಣಿ ದೀಪ ತಯಾರಿಸಿ ಅದನ್ನು 3 ದಿನ ಬಿಸಿಲಿನಲ್ಲಿ ಒಣಗಿಸಿ ಮಾರುಕಟ್ಟೆಗೆ ಕಳಿಸಲಾಗ್ತಿದೆ. ಮಾರುಕಟ್ಟೆಗೆ ಬಂದಿರೋ ಸಗಣಿ ದೀಪ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಗಣಿ ದೀಪಗಳಿಗೆ ಸಾಕಷ್ಟು ಬೇಡಿಕೆ ಬರುತ್ತಿದೆ ಅಂತಾರೆ ಗೋಶಾಲೆ ಸಿಬ್ಬಂದಿ.ಸಗಣಿ ದೀಪ ಹಚ್ಚಿದ್ರೆ ಅದರಿಂದ ಬರುವ ಹೊಗೆ ಗಾಳಿಯ ಜತೆ ಸೇರಿ ಗಾಳಿ ಶುದ್ಧವಾಗುತ್ತಂತೆ. ಜೊತೆಗೆ ಶುದ್ಧ ಗಾಳಿಯಿಂದ ರೋಗನಿರೋಧಕ ಶಕ್ತಿಯೂ ಹೆಚ್ಚಾಗಲಿದೆ ಅಂತಾರೆ ಗೋಶಾಲೆ ಸಿಬ್ಬಂದಿ. ಸಗಣಿ ದೀಪಗಳು ಮಾರುಕಟ್ಟೆಗೆ ಲಗ್ಗೆಯಿಡ್ತಿರೋದು ಖುಷಿಯ ಸಂಗತಿ. ಸಗಣಿ ದೀಪಗಳನ್ನ ಹಚ್ಚುವ ಮೂಲಕ ಜನ ಆರೋಗ್ಯಕರ ದೀಪಾವಳಿ ಆಚರಣೆ ಮಾಡಲಿ ಅನ್ನೋದು ನಮ್ಮ ಆಶಯ.

ಇದನ್ನೂ ವೀಕ್ಷಿಸಿ:  ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more