ಇದು ಜನವಿರೋಧಿ, ಸತ್ತು ಹೋಗಿರೋ ಸರ್ಕಾರ, ಜನರೇ ದಫನ್ ಮಾಡೋ ದಿನ ಬರುತ್ತೆ: ಸಿಟಿ ರವಿ

ಇದು ಜನವಿರೋಧಿ, ಸತ್ತು ಹೋಗಿರೋ ಸರ್ಕಾರ, ಜನರೇ ದಫನ್ ಮಾಡೋ ದಿನ ಬರುತ್ತೆ: ಸಿಟಿ ರವಿ

Published : Jun 16, 2024, 03:33 PM ISTUpdated : Jun 16, 2024, 03:34 PM IST

ಜನವಿರೋಧಿ ಸರ್ಕಾರ ಅನ್ನೋಕೆ ಮತ್ಯಾವ ಸರ್ಟಿಫಿಕೇಟ್ ಅಗತ್ಯ ಇಲ್ಲ. ಮೋದಿ ಪೆಟ್ರೋಲ್ ರೇಟ್ ಜಾಸ್ತಿ ಮಾಡಿದಾಗ ಸಿಎಂ ಸ್ಕೂಟಿ ಶವದ ಅಣುಕು ಪ್ರದರ್ಶನ ಮಾಡಿದ್ರು.ಈಗ ಯಾರನ್ನ ಹೊತ್ಕಂಡ್ ಹೋಗಬೇಕು ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬೆಲೆ ಏರಿಕೆ‌ಯನ್ನೇ ನೀತಿ ಮಾಡ್ಕೊಂಡಿದೆ. ಮೂಗು ಹಿಡಿದ್ರೆ ಬಾಯಿ ಬಿಡ್ಬೇಕಾಗುತ್ತೆ ಅಂತಾರಲ್ಲ ಹಾಗೆ. ಪೆಟ್ರೋಲ್-ಡಿಸೇಲ್ ಬೆಲೆ( Petrol diesel rate Rises) ಏರಿಕೆಯಾದ್ರೆ ಬೆಲೆ ಏರಿಕೆಗೆ ಲೈಸನ್ಸ್ ಕೊಟ್ಟಂಗೆ. ಕಷ್ಟದಲ್ಲಿರೋ ಜನರಿಗೆ ಸರ್ಕಾರ ಬೆಲೆ ಏರಿಕೆ ಬರೆ ಹಾಕಿದೆ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ(CT Ravi) ಕಿಡಿಕಾರಿದ್ದಾರೆ. ಜನವಿರೋಧಿ ಸರ್ಕಾರ(Congress government) ಅನ್ನೋಕೆ ಮತ್ಯಾವ ಸರ್ಟಿಫಿಕೇಟ್ ಅಗತ್ಯ ಇಲ್ಲ. ಮೋದಿ ಪೆಟ್ರೋಲ್ ರೇಟ್ ಜಾಸ್ತಿ ಮಾಡಿದಾಗ ಸಿಎಂ ಸ್ಕೂಟಿ ಶವದ ಅಣುಕು ಪ್ರದರ್ಶನ ಮಾಡಿದ್ರು. ಈಗ ಯಾರನ್ನ ಹೊತ್ಕಂಡ್ ಹೋಗಬೇಕು, ನಿಮ್ಮ ಸರ್ಕಾರವನ್ನೇ ಹೊತ್ಕಂಡ್ ಹೋಗಬೇಕಾ ? ಇದು ಜನವಿರೋಧಿ ಸರ್ಕಾರ, ಸತ್ತು ಹೋಗಿರೋ ಸರ್ಕಾರ, ಜನರೇ ಈ ಸರ್ಕಾರವನ್ನ ದಫನ್ ಮಾಡೋ ದಿನ ಬರುತ್ತೆ. ಚುನಾವಣೆ ಸೋಲಿನ ಬಳಿಕ ಸರ್ಕಾರ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ರಾಜಕೀಯ ಪಕ್ಷ, ನಾಯಕರ ಮೇಲೆ ಸೇಡು ಆಯ್ತು, ಈಗ ಜನಸಾಮಾನ್ಯರ ಮೇಲೆ. ಕೂಡಲೇ ಬೆಲೆ ಏರಿಕೆ ಅದೇಶವನ್ನ ಹಿಂಪಡೆಯಬೇಕು. ನೀವು ಮಾಡಿರೋದು ಬೆಲೆ ಏರಿಕೆ, ಲೂಟಿ ಎರಡೇ... ಮಾಡಿದ್ದೀರಾ ? ಓಲೈಕೆ ರಾಜಕಾರಣಕ್ಕೆ ಗ್ಯಾರಂಟಿ ಆಸೆ ತೋರಿಸಿದ್ರಿ, ಅದು ಧಕ್ಕದಿದ್ದಾಗ ಬೆಲೆ ಏರಿಕೆ ಮಾಡಿದ್ದೀರಾ? ನಾಚಿಕೆ, ಮಾನ, ಮರ್ಯಾದೆ ಅನ್ನೋದಾದ್ರೆ ಯಾವುದನ್ನ ಇಟ್ಕೊಂಡು ಇದನ್ನ ಮಾಡಿದ್ದೀರಾ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ  ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲಿ ಭ್ರೂಣ ಹತ್ಯೆ ಜಾಲ ಪತ್ತೆ..ತನಿಖೆ ವೇಳೆ ನಕಲಿ ವೈದ್ಯನ ಕರಾಳ ಮುಖ ಬಯಲು!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more