ಇದು ಜನವಿರೋಧಿ, ಸತ್ತು ಹೋಗಿರೋ ಸರ್ಕಾರ, ಜನರೇ ದಫನ್ ಮಾಡೋ ದಿನ ಬರುತ್ತೆ: ಸಿಟಿ ರವಿ

ಇದು ಜನವಿರೋಧಿ, ಸತ್ತು ಹೋಗಿರೋ ಸರ್ಕಾರ, ಜನರೇ ದಫನ್ ಮಾಡೋ ದಿನ ಬರುತ್ತೆ: ಸಿಟಿ ರವಿ

Published : Jun 16, 2024, 03:33 PM ISTUpdated : Jun 16, 2024, 03:34 PM IST

ಜನವಿರೋಧಿ ಸರ್ಕಾರ ಅನ್ನೋಕೆ ಮತ್ಯಾವ ಸರ್ಟಿಫಿಕೇಟ್ ಅಗತ್ಯ ಇಲ್ಲ. ಮೋದಿ ಪೆಟ್ರೋಲ್ ರೇಟ್ ಜಾಸ್ತಿ ಮಾಡಿದಾಗ ಸಿಎಂ ಸ್ಕೂಟಿ ಶವದ ಅಣುಕು ಪ್ರದರ್ಶನ ಮಾಡಿದ್ರು.ಈಗ ಯಾರನ್ನ ಹೊತ್ಕಂಡ್ ಹೋಗಬೇಕು ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬೆಲೆ ಏರಿಕೆ‌ಯನ್ನೇ ನೀತಿ ಮಾಡ್ಕೊಂಡಿದೆ. ಮೂಗು ಹಿಡಿದ್ರೆ ಬಾಯಿ ಬಿಡ್ಬೇಕಾಗುತ್ತೆ ಅಂತಾರಲ್ಲ ಹಾಗೆ. ಪೆಟ್ರೋಲ್-ಡಿಸೇಲ್ ಬೆಲೆ( Petrol diesel rate Rises) ಏರಿಕೆಯಾದ್ರೆ ಬೆಲೆ ಏರಿಕೆಗೆ ಲೈಸನ್ಸ್ ಕೊಟ್ಟಂಗೆ. ಕಷ್ಟದಲ್ಲಿರೋ ಜನರಿಗೆ ಸರ್ಕಾರ ಬೆಲೆ ಏರಿಕೆ ಬರೆ ಹಾಕಿದೆ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ(CT Ravi) ಕಿಡಿಕಾರಿದ್ದಾರೆ. ಜನವಿರೋಧಿ ಸರ್ಕಾರ(Congress government) ಅನ್ನೋಕೆ ಮತ್ಯಾವ ಸರ್ಟಿಫಿಕೇಟ್ ಅಗತ್ಯ ಇಲ್ಲ. ಮೋದಿ ಪೆಟ್ರೋಲ್ ರೇಟ್ ಜಾಸ್ತಿ ಮಾಡಿದಾಗ ಸಿಎಂ ಸ್ಕೂಟಿ ಶವದ ಅಣುಕು ಪ್ರದರ್ಶನ ಮಾಡಿದ್ರು. ಈಗ ಯಾರನ್ನ ಹೊತ್ಕಂಡ್ ಹೋಗಬೇಕು, ನಿಮ್ಮ ಸರ್ಕಾರವನ್ನೇ ಹೊತ್ಕಂಡ್ ಹೋಗಬೇಕಾ ? ಇದು ಜನವಿರೋಧಿ ಸರ್ಕಾರ, ಸತ್ತು ಹೋಗಿರೋ ಸರ್ಕಾರ, ಜನರೇ ಈ ಸರ್ಕಾರವನ್ನ ದಫನ್ ಮಾಡೋ ದಿನ ಬರುತ್ತೆ. ಚುನಾವಣೆ ಸೋಲಿನ ಬಳಿಕ ಸರ್ಕಾರ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ರಾಜಕೀಯ ಪಕ್ಷ, ನಾಯಕರ ಮೇಲೆ ಸೇಡು ಆಯ್ತು, ಈಗ ಜನಸಾಮಾನ್ಯರ ಮೇಲೆ. ಕೂಡಲೇ ಬೆಲೆ ಏರಿಕೆ ಅದೇಶವನ್ನ ಹಿಂಪಡೆಯಬೇಕು. ನೀವು ಮಾಡಿರೋದು ಬೆಲೆ ಏರಿಕೆ, ಲೂಟಿ ಎರಡೇ... ಮಾಡಿದ್ದೀರಾ ? ಓಲೈಕೆ ರಾಜಕಾರಣಕ್ಕೆ ಗ್ಯಾರಂಟಿ ಆಸೆ ತೋರಿಸಿದ್ರಿ, ಅದು ಧಕ್ಕದಿದ್ದಾಗ ಬೆಲೆ ಏರಿಕೆ ಮಾಡಿದ್ದೀರಾ? ನಾಚಿಕೆ, ಮಾನ, ಮರ್ಯಾದೆ ಅನ್ನೋದಾದ್ರೆ ಯಾವುದನ್ನ ಇಟ್ಕೊಂಡು ಇದನ್ನ ಮಾಡಿದ್ದೀರಾ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ  ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲಿ ಭ್ರೂಣ ಹತ್ಯೆ ಜಾಲ ಪತ್ತೆ..ತನಿಖೆ ವೇಳೆ ನಕಲಿ ವೈದ್ಯನ ಕರಾಳ ಮುಖ ಬಯಲು!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more