ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Published : Oct 19, 2023, 11:24 AM IST

ಕರಾವಳಿ ಜಿಲ್ಲೆಗಳಿಗೆ ಚಂಡಮಾರುತದ ಅಲರ್ಟ್ ನೀಡಲಾಗಿದೆ. ನಾಲ್ಕು ದಿನಗಳ ನಿರಂತರ ಮಳೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಂಜಾಗೃಕತವಾಗಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ. ಮೀನಿನ ಬೇಟೆಗೆ ಹೋಗಿದ್ದ ಬೋಟುಗಳು ಬಂದರಿಗೆ ವಾಪಸ್ ಆಗುತ್ತಿವೆ.
 

ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಬಿಪೊರ್ ಜಾಯ್ ಚಂಡಮಾರುತದ ಬಳಿಕ ಕರಾವಳಿ ಜಿಲ್ಲೆಗಳಿಗೆ ಮತ್ತೊಂದು ಚಂಡಮಾರುತದ(Cyclone) ಭೀತಿ ಎದುರಾಗಿದೆ.. ಹೀಗಾಗಿ 4 ದಿನಗಳ ಕಾಲ  ಕಡಲಿಗೆ ಇಳಿಯಬಾರದು ಎಂದು ಮೀನುಗಾರರಿಗೆ(Fishermens) ಎಚ್ಚರಿಕೆ ನೀಡಲಾಗಿದೆ. ಕೇಂದ್ರ ಹವಾಮಾನ ಇಲಾಖೆಯ ಸೂಚನೆ ಪ್ರಕಾರ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ..ಹೀಗಾಗಿ ಬಂದರಿನಲ್ಲಿ ಲಂಗರು ಹಾಕಿರುವ ಬೋಟುಗಳು ಸ್ಥಳದಲ್ಲೇ ತಂಗಿದ್ದು, ಮೀನುಗಾರಿಕೆಗೆ ಹೋಗಿದ್ದ ಬೋಟುಗಳು ವಾಪಸ್ ಆಗುತ್ತಿವೆ. ಇನ್ನು ಜುಲೈ ತಿಂಗಳಲ್ಲಿ ಮೀನು ಹಿಡಿಯಲಾಗದೆ ಕಂಗಾಲಾಗಿದ್ದ ಮೀನುಗಾರರ ದೋಣಿಗಳು  ಮತ್ತೆ ಕಡಲತೀರ ಸೇರುತ್ತಿವೆ. ಉತ್ತಮ ಮೀನುಗಾರಿಕೆಯ ಕನಸು ಹೊತ್ತಿದ್ದ ಯಾಂತ್ರಿಕೃತ ಬೋಟುಗಳು ಕೈಚೆಲ್ಲಿ ಕುಳಿತಿವೆ. ಚಂಡಮಾರುತದಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಗಾಳಿಯ ವೇಗವು ಗಂಟೆಗೆ 40-45ರಿಂದ 55ಕಿ.ಮೀ. ಇರುವುದರಿಂದ ಸಮುದ್ರ ಪ್ರಕ್ಷುಬ್ಧಗೊಳ್ಳಲಿದೆ.. ಸಾರ್ವಜನಿಕರು, ಪ್ರವಾಸಿಗರೂ ಸಹ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.

ಇದನ್ನೂ ವೀಕ್ಷಿಸಿ:  ಭೀಮಾತೀರದಲ್ಲಿ ಇನ್ನೂ ನಿಲ್ಲದ ಗನ್‌ ಹಾವಳಿ: ಗ್ರಾಮ ಪಂಚಾಯ್ತಿಗೆ ಪಿಸ್ತೂಲ್ ತಂದು ಪಿಡಿಓ ಮೇಲೆ ಹಲ್ಲೆ !

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more