ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Published : Oct 19, 2023, 11:24 AM IST

ಕರಾವಳಿ ಜಿಲ್ಲೆಗಳಿಗೆ ಚಂಡಮಾರುತದ ಅಲರ್ಟ್ ನೀಡಲಾಗಿದೆ. ನಾಲ್ಕು ದಿನಗಳ ನಿರಂತರ ಮಳೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಂಜಾಗೃಕತವಾಗಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ. ಮೀನಿನ ಬೇಟೆಗೆ ಹೋಗಿದ್ದ ಬೋಟುಗಳು ಬಂದರಿಗೆ ವಾಪಸ್ ಆಗುತ್ತಿವೆ.
 

ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಬಿಪೊರ್ ಜಾಯ್ ಚಂಡಮಾರುತದ ಬಳಿಕ ಕರಾವಳಿ ಜಿಲ್ಲೆಗಳಿಗೆ ಮತ್ತೊಂದು ಚಂಡಮಾರುತದ(Cyclone) ಭೀತಿ ಎದುರಾಗಿದೆ.. ಹೀಗಾಗಿ 4 ದಿನಗಳ ಕಾಲ  ಕಡಲಿಗೆ ಇಳಿಯಬಾರದು ಎಂದು ಮೀನುಗಾರರಿಗೆ(Fishermens) ಎಚ್ಚರಿಕೆ ನೀಡಲಾಗಿದೆ. ಕೇಂದ್ರ ಹವಾಮಾನ ಇಲಾಖೆಯ ಸೂಚನೆ ಪ್ರಕಾರ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ..ಹೀಗಾಗಿ ಬಂದರಿನಲ್ಲಿ ಲಂಗರು ಹಾಕಿರುವ ಬೋಟುಗಳು ಸ್ಥಳದಲ್ಲೇ ತಂಗಿದ್ದು, ಮೀನುಗಾರಿಕೆಗೆ ಹೋಗಿದ್ದ ಬೋಟುಗಳು ವಾಪಸ್ ಆಗುತ್ತಿವೆ. ಇನ್ನು ಜುಲೈ ತಿಂಗಳಲ್ಲಿ ಮೀನು ಹಿಡಿಯಲಾಗದೆ ಕಂಗಾಲಾಗಿದ್ದ ಮೀನುಗಾರರ ದೋಣಿಗಳು  ಮತ್ತೆ ಕಡಲತೀರ ಸೇರುತ್ತಿವೆ. ಉತ್ತಮ ಮೀನುಗಾರಿಕೆಯ ಕನಸು ಹೊತ್ತಿದ್ದ ಯಾಂತ್ರಿಕೃತ ಬೋಟುಗಳು ಕೈಚೆಲ್ಲಿ ಕುಳಿತಿವೆ. ಚಂಡಮಾರುತದಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಗಾಳಿಯ ವೇಗವು ಗಂಟೆಗೆ 40-45ರಿಂದ 55ಕಿ.ಮೀ. ಇರುವುದರಿಂದ ಸಮುದ್ರ ಪ್ರಕ್ಷುಬ್ಧಗೊಳ್ಳಲಿದೆ.. ಸಾರ್ವಜನಿಕರು, ಪ್ರವಾಸಿಗರೂ ಸಹ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.

ಇದನ್ನೂ ವೀಕ್ಷಿಸಿ:  ಭೀಮಾತೀರದಲ್ಲಿ ಇನ್ನೂ ನಿಲ್ಲದ ಗನ್‌ ಹಾವಳಿ: ಗ್ರಾಮ ಪಂಚಾಯ್ತಿಗೆ ಪಿಸ್ತೂಲ್ ತಂದು ಪಿಡಿಓ ಮೇಲೆ ಹಲ್ಲೆ !

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more