ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Published : Oct 19, 2023, 11:24 AM IST

ಕರಾವಳಿ ಜಿಲ್ಲೆಗಳಿಗೆ ಚಂಡಮಾರುತದ ಅಲರ್ಟ್ ನೀಡಲಾಗಿದೆ. ನಾಲ್ಕು ದಿನಗಳ ನಿರಂತರ ಮಳೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಂಜಾಗೃಕತವಾಗಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ. ಮೀನಿನ ಬೇಟೆಗೆ ಹೋಗಿದ್ದ ಬೋಟುಗಳು ಬಂದರಿಗೆ ವಾಪಸ್ ಆಗುತ್ತಿವೆ.
 

ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಬಿಪೊರ್ ಜಾಯ್ ಚಂಡಮಾರುತದ ಬಳಿಕ ಕರಾವಳಿ ಜಿಲ್ಲೆಗಳಿಗೆ ಮತ್ತೊಂದು ಚಂಡಮಾರುತದ(Cyclone) ಭೀತಿ ಎದುರಾಗಿದೆ.. ಹೀಗಾಗಿ 4 ದಿನಗಳ ಕಾಲ  ಕಡಲಿಗೆ ಇಳಿಯಬಾರದು ಎಂದು ಮೀನುಗಾರರಿಗೆ(Fishermens) ಎಚ್ಚರಿಕೆ ನೀಡಲಾಗಿದೆ. ಕೇಂದ್ರ ಹವಾಮಾನ ಇಲಾಖೆಯ ಸೂಚನೆ ಪ್ರಕಾರ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ..ಹೀಗಾಗಿ ಬಂದರಿನಲ್ಲಿ ಲಂಗರು ಹಾಕಿರುವ ಬೋಟುಗಳು ಸ್ಥಳದಲ್ಲೇ ತಂಗಿದ್ದು, ಮೀನುಗಾರಿಕೆಗೆ ಹೋಗಿದ್ದ ಬೋಟುಗಳು ವಾಪಸ್ ಆಗುತ್ತಿವೆ. ಇನ್ನು ಜುಲೈ ತಿಂಗಳಲ್ಲಿ ಮೀನು ಹಿಡಿಯಲಾಗದೆ ಕಂಗಾಲಾಗಿದ್ದ ಮೀನುಗಾರರ ದೋಣಿಗಳು  ಮತ್ತೆ ಕಡಲತೀರ ಸೇರುತ್ತಿವೆ. ಉತ್ತಮ ಮೀನುಗಾರಿಕೆಯ ಕನಸು ಹೊತ್ತಿದ್ದ ಯಾಂತ್ರಿಕೃತ ಬೋಟುಗಳು ಕೈಚೆಲ್ಲಿ ಕುಳಿತಿವೆ. ಚಂಡಮಾರುತದಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಗಾಳಿಯ ವೇಗವು ಗಂಟೆಗೆ 40-45ರಿಂದ 55ಕಿ.ಮೀ. ಇರುವುದರಿಂದ ಸಮುದ್ರ ಪ್ರಕ್ಷುಬ್ಧಗೊಳ್ಳಲಿದೆ.. ಸಾರ್ವಜನಿಕರು, ಪ್ರವಾಸಿಗರೂ ಸಹ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.

ಇದನ್ನೂ ವೀಕ್ಷಿಸಿ:  ಭೀಮಾತೀರದಲ್ಲಿ ಇನ್ನೂ ನಿಲ್ಲದ ಗನ್‌ ಹಾವಳಿ: ಗ್ರಾಮ ಪಂಚಾಯ್ತಿಗೆ ಪಿಸ್ತೂಲ್ ತಂದು ಪಿಡಿಓ ಮೇಲೆ ಹಲ್ಲೆ !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more