ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Published : Oct 19, 2023, 11:24 AM IST

ಕರಾವಳಿ ಜಿಲ್ಲೆಗಳಿಗೆ ಚಂಡಮಾರುತದ ಅಲರ್ಟ್ ನೀಡಲಾಗಿದೆ. ನಾಲ್ಕು ದಿನಗಳ ನಿರಂತರ ಮಳೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಂಜಾಗೃಕತವಾಗಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ. ಮೀನಿನ ಬೇಟೆಗೆ ಹೋಗಿದ್ದ ಬೋಟುಗಳು ಬಂದರಿಗೆ ವಾಪಸ್ ಆಗುತ್ತಿವೆ.
 

ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಬಿಪೊರ್ ಜಾಯ್ ಚಂಡಮಾರುತದ ಬಳಿಕ ಕರಾವಳಿ ಜಿಲ್ಲೆಗಳಿಗೆ ಮತ್ತೊಂದು ಚಂಡಮಾರುತದ(Cyclone) ಭೀತಿ ಎದುರಾಗಿದೆ.. ಹೀಗಾಗಿ 4 ದಿನಗಳ ಕಾಲ  ಕಡಲಿಗೆ ಇಳಿಯಬಾರದು ಎಂದು ಮೀನುಗಾರರಿಗೆ(Fishermens) ಎಚ್ಚರಿಕೆ ನೀಡಲಾಗಿದೆ. ಕೇಂದ್ರ ಹವಾಮಾನ ಇಲಾಖೆಯ ಸೂಚನೆ ಪ್ರಕಾರ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ..ಹೀಗಾಗಿ ಬಂದರಿನಲ್ಲಿ ಲಂಗರು ಹಾಕಿರುವ ಬೋಟುಗಳು ಸ್ಥಳದಲ್ಲೇ ತಂಗಿದ್ದು, ಮೀನುಗಾರಿಕೆಗೆ ಹೋಗಿದ್ದ ಬೋಟುಗಳು ವಾಪಸ್ ಆಗುತ್ತಿವೆ. ಇನ್ನು ಜುಲೈ ತಿಂಗಳಲ್ಲಿ ಮೀನು ಹಿಡಿಯಲಾಗದೆ ಕಂಗಾಲಾಗಿದ್ದ ಮೀನುಗಾರರ ದೋಣಿಗಳು  ಮತ್ತೆ ಕಡಲತೀರ ಸೇರುತ್ತಿವೆ. ಉತ್ತಮ ಮೀನುಗಾರಿಕೆಯ ಕನಸು ಹೊತ್ತಿದ್ದ ಯಾಂತ್ರಿಕೃತ ಬೋಟುಗಳು ಕೈಚೆಲ್ಲಿ ಕುಳಿತಿವೆ. ಚಂಡಮಾರುತದಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಗಾಳಿಯ ವೇಗವು ಗಂಟೆಗೆ 40-45ರಿಂದ 55ಕಿ.ಮೀ. ಇರುವುದರಿಂದ ಸಮುದ್ರ ಪ್ರಕ್ಷುಬ್ಧಗೊಳ್ಳಲಿದೆ.. ಸಾರ್ವಜನಿಕರು, ಪ್ರವಾಸಿಗರೂ ಸಹ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.

ಇದನ್ನೂ ವೀಕ್ಷಿಸಿ:  ಭೀಮಾತೀರದಲ್ಲಿ ಇನ್ನೂ ನಿಲ್ಲದ ಗನ್‌ ಹಾವಳಿ: ಗ್ರಾಮ ಪಂಚಾಯ್ತಿಗೆ ಪಿಸ್ತೂಲ್ ತಂದು ಪಿಡಿಓ ಮೇಲೆ ಹಲ್ಲೆ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more