ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಅಕ್ರಮ: ಗುಜರಿ ಮಾರಾಟದಲ್ಲಿ ಗೋಲ್ಮಾಲ್!

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಅಕ್ರಮ: ಗುಜರಿ ಮಾರಾಟದಲ್ಲಿ ಗೋಲ್ಮಾಲ್!

Published : Oct 22, 2023, 01:22 PM IST

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಮುಚ್ಚಿ ಒಂದೂವರೆ ದಶಕ ಕಳೆದ ನಂತರ ಗುಜರಿ ವಸ್ತುಗಳಲ್ಲಿ ಕೋಟ್ಯಂತರ ರೂ, ಅಕ್ರಮ ನಡೆದಿದೆ ಎಂಬ ಆರೋಪ ವ್ಯಕ್ತವಾಗಿದೆ.

ದಕ್ಷಿಣ ಕನ್ನಡ (ಅ.22): ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಮುಚ್ಚಿ ಒಂದೂವರೆ ದಶಕ ಕಳೆದ ನಂತರ ಗುಜರಿ ವಸ್ತುಗಳಲ್ಲಿ ಕೋಟ್ಯಂತರ ರೂ, ಅಕ್ರಮ ನಡೆದಿದೆ ಎಂಬ ಆರೋಪ ವ್ಯಕ್ತವಾಗಿದೆ. ಶೀಘ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರಹ್ಮಾವರಕ್ಕೆ ಆಗಮಿಸಲಿದ್ದು, ಆಗ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅಕ್ರಮದ ಬಗ್ಗೆ ತನಿಖೆ ಮಾಡುವಂತೆ ಒತ್ತಾಯಿಸಲಿದ್ದಾರೆ.

ಕರಾವಳಿ ಭಾಗದ ಏಕೈಕ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಾಗಿತತು. ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ, ಬ್ರಹ್ಮಾವರ ಇದು ಆರಂಭವಾಗಿದ್ದೇ ಸಹಕಾರಿ ತತ್ವದ ಅಡಿಯಲ್ಲಿ. ಆದರೆ, ಇದು ಮುಚ್ಚಿ ಒಂದೂವರೆ ದಶಕಗಳೇ ಕಳೆದಿವೆ. ಈಗ ಕಾರ್ಖಾನೆಯಲ್ಲಿ ಅಕ್ರಮ ನಡೆದಿರುವ ಆರೋಪ ಈಗ ಕೇಳಿಬಂದಿದೆ. ಅಸಮರ್ಪಕ ನಿರ್ವಹಣೆ ಕಾರಣದಿಂದಾಗಿ ಈ ಕಾರ್ಖಾನೆಯನ್ನು ಮುಚ್ಚಲಾಗಿದೆ. ಆದರೆ, ಕಾರ್ಖಾನೆಯ ಕಬ್ಬಿಣದ ವಸ್ತುಗಳನ್ನು ಮಾರಾಟ ಮಾಡುವಲ್ಲಿ ಕಳೆದ ಬಿಜೆಪಿ ಸರ್ಕಾರದಿಂದ ಭಾರಿ ದೊಡ್ಡ ಹಗರಣವನ್ನು ಮಾಡಿದ್ದಾರೆ. ಕೋಟಿ ಕೋಟಿ ರೂ. ಹಣವನ್ನು ಲೂಟಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹಿಂದಿನ ಬಿಜೆಪಿ ಸರ್ಕಾರದಲ್ಲಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿಕೊಂಡು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿನ ಎಲ್ಲ ವಸ್ತುಗಳನ್ನು ಚೆನ್ನೈ ಸಂಸ್ಥೆಗೆ ಮಾರಾಟ ಮಾಡಿದ್ದಾರೆ. ಟೆಂಡರ್‌ ಕರೆಯುವಾಗ ಹೆಚ್ಚಿನ ಮೊತ್ತಕ್ಕೆ ಗುಜರಿ ವಸ್ತುಗಳ ಮಾರಾಟದ ಬೆಲೆಯನ್ನು ತೆಗೆದುಕೊಂಡು, ವಸ್ತುಗಳನ್ನು ಮಾರಾಟ ಮಾಡಿದ ನಂತರ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡಲಾಗಿದೆ ಎಂದು ರಶೀದಿಯನ್ನು ಸಿದ್ಧಪಡಿಸಿದ್ದಾರೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಆರೋಪಿಸಿದ್ದಾರೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more