ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಅಕ್ರಮ: ಗುಜರಿ ಮಾರಾಟದಲ್ಲಿ ಗೋಲ್ಮಾಲ್!

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಅಕ್ರಮ: ಗುಜರಿ ಮಾರಾಟದಲ್ಲಿ ಗೋಲ್ಮಾಲ್!

Published : Oct 22, 2023, 01:22 PM IST

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಮುಚ್ಚಿ ಒಂದೂವರೆ ದಶಕ ಕಳೆದ ನಂತರ ಗುಜರಿ ವಸ್ತುಗಳಲ್ಲಿ ಕೋಟ್ಯಂತರ ರೂ, ಅಕ್ರಮ ನಡೆದಿದೆ ಎಂಬ ಆರೋಪ ವ್ಯಕ್ತವಾಗಿದೆ.

ದಕ್ಷಿಣ ಕನ್ನಡ (ಅ.22): ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಮುಚ್ಚಿ ಒಂದೂವರೆ ದಶಕ ಕಳೆದ ನಂತರ ಗುಜರಿ ವಸ್ತುಗಳಲ್ಲಿ ಕೋಟ್ಯಂತರ ರೂ, ಅಕ್ರಮ ನಡೆದಿದೆ ಎಂಬ ಆರೋಪ ವ್ಯಕ್ತವಾಗಿದೆ. ಶೀಘ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರಹ್ಮಾವರಕ್ಕೆ ಆಗಮಿಸಲಿದ್ದು, ಆಗ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅಕ್ರಮದ ಬಗ್ಗೆ ತನಿಖೆ ಮಾಡುವಂತೆ ಒತ್ತಾಯಿಸಲಿದ್ದಾರೆ.

ಕರಾವಳಿ ಭಾಗದ ಏಕೈಕ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಾಗಿತತು. ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ, ಬ್ರಹ್ಮಾವರ ಇದು ಆರಂಭವಾಗಿದ್ದೇ ಸಹಕಾರಿ ತತ್ವದ ಅಡಿಯಲ್ಲಿ. ಆದರೆ, ಇದು ಮುಚ್ಚಿ ಒಂದೂವರೆ ದಶಕಗಳೇ ಕಳೆದಿವೆ. ಈಗ ಕಾರ್ಖಾನೆಯಲ್ಲಿ ಅಕ್ರಮ ನಡೆದಿರುವ ಆರೋಪ ಈಗ ಕೇಳಿಬಂದಿದೆ. ಅಸಮರ್ಪಕ ನಿರ್ವಹಣೆ ಕಾರಣದಿಂದಾಗಿ ಈ ಕಾರ್ಖಾನೆಯನ್ನು ಮುಚ್ಚಲಾಗಿದೆ. ಆದರೆ, ಕಾರ್ಖಾನೆಯ ಕಬ್ಬಿಣದ ವಸ್ತುಗಳನ್ನು ಮಾರಾಟ ಮಾಡುವಲ್ಲಿ ಕಳೆದ ಬಿಜೆಪಿ ಸರ್ಕಾರದಿಂದ ಭಾರಿ ದೊಡ್ಡ ಹಗರಣವನ್ನು ಮಾಡಿದ್ದಾರೆ. ಕೋಟಿ ಕೋಟಿ ರೂ. ಹಣವನ್ನು ಲೂಟಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹಿಂದಿನ ಬಿಜೆಪಿ ಸರ್ಕಾರದಲ್ಲಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿಕೊಂಡು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿನ ಎಲ್ಲ ವಸ್ತುಗಳನ್ನು ಚೆನ್ನೈ ಸಂಸ್ಥೆಗೆ ಮಾರಾಟ ಮಾಡಿದ್ದಾರೆ. ಟೆಂಡರ್‌ ಕರೆಯುವಾಗ ಹೆಚ್ಚಿನ ಮೊತ್ತಕ್ಕೆ ಗುಜರಿ ವಸ್ತುಗಳ ಮಾರಾಟದ ಬೆಲೆಯನ್ನು ತೆಗೆದುಕೊಂಡು, ವಸ್ತುಗಳನ್ನು ಮಾರಾಟ ಮಾಡಿದ ನಂತರ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡಲಾಗಿದೆ ಎಂದು ರಶೀದಿಯನ್ನು ಸಿದ್ಧಪಡಿಸಿದ್ದಾರೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಆರೋಪಿಸಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more