ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

Published : Jun 16, 2024, 11:14 AM IST

ಇಂದು ಕೂಡ ದಕ್ಷಿಣ ಭಾರತ ಉತ್ಸವ ನಡೆಯಲಿದ್ದು, ಹಲವಾರು ಒಡಂಬಡಿಕೆಗಳಿಗೆ ಇದು ಸಾಕ್ಷಿಯಾಗಲಿದೆ. ದಕ್ಷಿಣ ಭಾರತದ ಏಳು ರಾಜ್ಯಗಳ ಪ್ರವಾಸೋದ್ಯಮ ಅಭಿವೃದ್ದಿ ಕುರಿತು ವಿವಿಧ ಚರ್ಚೆಗಳು ನಡೆಯಲಿವೆ.

FKCCI ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಭಾರತ ಉತ್ಸವ -2024ಕ್ಕೆ ಚಾಲನೆ ಸಿಕ್ಕಿದೆ. ಇಂದು ಮತ್ತು ನಾಳೆ ನಡೆಯಲಿರುವ ಈ ಉತ್ಸವಕ್ಕೆ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಸಹಭಾಗಿತ್ವ ನೀಡುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ದೀಪ ಬೆಳಗುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ದಕ್ಷಿಣ ಭಾರತದ ಏಳು ರಾಜ್ಯಗಳ ಪ್ರವಾಸೋದ್ಯಮ ಇಲಾಖೆಯ ಪ್ರತಿನಿಧಿಗಳು ಸೇರಿದಂತೆ ದೇಶ ವಿದೇಶಗಳ ಗಣ್ಯರು, ಹೂಡಿಕೆದಾರರು ಈ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ದಕ್ಷಿಣ ಭಾರತದ ಪ್ರವಾಸೋದ್ಯಮ ಕ್ಷೇತ್ರವನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಉತ್ಸವ ನಡೆಯುತ್ತಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಹಲವಾರು ಜನ ಹೂಡಿಕೆದಾರರು ಪ್ರವಾಸೋದ್ಯಮಕ್ಕೆ ಹೂಡಿಕೆ ಮಾಡಲು ಮುಂದೆ ಬರುತ್ತಿದ್ದಾರೆ. ಅವರೆಲ್ಲರಿಗೂ ತೆರಿಗೆಯಲ್ಲಿ ವಿನಾಯಿತಿ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರಯತ್ನಿಸುತ್ತೇವೆ. ಬೆಂಗಳೂರು ಅಂದಾಕ್ಷಣ ಬರೀ ವಿಧಾನಸೌಧ ನೋಡಿ ಹೋಗ್ತಾರೆ. ಆದರೆ ಬೆಂಗಳೂರಿನಲ್ಲಿ ಇನ್ನೂ ಅನೇಕ ಪ್ರವಾಸಿ ಸ್ಥಳಗಳಿವೆ. ಅದರ ಅಭಿವೃದ್ಧಿ ಆಗಬೇಕಿದೆ. ಇದಕ್ಕಾಗಿ ಬ್ರಾಂಡ್ ಬೆಂಗಳೂರು ಪ್ರಾಜೆಕ್ಟ್ ನಲ್ಲಿ ಪ್ಲಾನಿಂಗ್ ರೂಪಿಸಲಾಗಿದೆ ಎಂದರು. ಇನ್ನು ಇದೇ ವೇಳೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ನಾವು ಬರೀ ಸಿರಿವಂತರನ್ನು ಮಾತ್ರ ಇಟ್ಟುಕೊಂಡು ಪ್ರವಾಸೋದ್ಯಮ ಅಭಿವೃದ್ಧಿ ಮಾಡುತ್ತಿಲ್ಲ. ಮಧ್ಯಮ ವರ್ಗ ಮತ್ತು ಬಡವರ್ಗದ ಜನರಿಗೂ ಪ್ರವಾಸ ಅನುಕೂಲಕರವಾಗಬೇಕು. ಹೊರ ದೇಶದ ಅಥವಾ ಹೊರ ರಾಜ್ಯದ ಪ್ರವಾಸಿಗರನ್ನು ಆಕರ್ಷಿಸಬೇಕು ಅಂತ ಗ್ಯಾಂಬ್ಲಿಂಗ್, ಕೆಸಿನೋದಂತಹ ವಿಚಾರಗಳಿಗೂ ಪ್ರೋತ್ಸಾಹಿಸೋದು ಬೇಡ. ಸಾಮಾಜಿಕ ಕಾಳಜಿ ಜೊತೆ ಪ್ರವಾಸಿ ತಾಣಗಳನ್ನು ನಿರ್ಮಿಸೋಣ ಎಂದು ಹೂಡಿಕೆದಾರರಿಗೆ ಕಿವಿ ಮಾತು ಹೇಳಿದರು. 

ಇದನ್ನೂ ವೀಕ್ಷಿಸಿ:  ಫರ್ನಿಚರ್‌ ಹಾಗೂ ಲೈಫ್‌ ಸ್ಟೈಲ್‌ ಎಕ್ಸ್‌ ಪೋ..ಇಂದೇ ಭೇಟಿ ನೀಡಿ ನಿಮಗಿಷ್ಟವಾದ ಗೃಹಪಯೋಗಿ ವಸ್ತು ಖರೀದಿಸಿ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more