ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

Published : Jun 16, 2024, 11:14 AM IST

ಇಂದು ಕೂಡ ದಕ್ಷಿಣ ಭಾರತ ಉತ್ಸವ ನಡೆಯಲಿದ್ದು, ಹಲವಾರು ಒಡಂಬಡಿಕೆಗಳಿಗೆ ಇದು ಸಾಕ್ಷಿಯಾಗಲಿದೆ. ದಕ್ಷಿಣ ಭಾರತದ ಏಳು ರಾಜ್ಯಗಳ ಪ್ರವಾಸೋದ್ಯಮ ಅಭಿವೃದ್ದಿ ಕುರಿತು ವಿವಿಧ ಚರ್ಚೆಗಳು ನಡೆಯಲಿವೆ.

FKCCI ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಭಾರತ ಉತ್ಸವ -2024ಕ್ಕೆ ಚಾಲನೆ ಸಿಕ್ಕಿದೆ. ಇಂದು ಮತ್ತು ನಾಳೆ ನಡೆಯಲಿರುವ ಈ ಉತ್ಸವಕ್ಕೆ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಸಹಭಾಗಿತ್ವ ನೀಡುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ದೀಪ ಬೆಳಗುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ದಕ್ಷಿಣ ಭಾರತದ ಏಳು ರಾಜ್ಯಗಳ ಪ್ರವಾಸೋದ್ಯಮ ಇಲಾಖೆಯ ಪ್ರತಿನಿಧಿಗಳು ಸೇರಿದಂತೆ ದೇಶ ವಿದೇಶಗಳ ಗಣ್ಯರು, ಹೂಡಿಕೆದಾರರು ಈ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ದಕ್ಷಿಣ ಭಾರತದ ಪ್ರವಾಸೋದ್ಯಮ ಕ್ಷೇತ್ರವನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಉತ್ಸವ ನಡೆಯುತ್ತಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಹಲವಾರು ಜನ ಹೂಡಿಕೆದಾರರು ಪ್ರವಾಸೋದ್ಯಮಕ್ಕೆ ಹೂಡಿಕೆ ಮಾಡಲು ಮುಂದೆ ಬರುತ್ತಿದ್ದಾರೆ. ಅವರೆಲ್ಲರಿಗೂ ತೆರಿಗೆಯಲ್ಲಿ ವಿನಾಯಿತಿ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರಯತ್ನಿಸುತ್ತೇವೆ. ಬೆಂಗಳೂರು ಅಂದಾಕ್ಷಣ ಬರೀ ವಿಧಾನಸೌಧ ನೋಡಿ ಹೋಗ್ತಾರೆ. ಆದರೆ ಬೆಂಗಳೂರಿನಲ್ಲಿ ಇನ್ನೂ ಅನೇಕ ಪ್ರವಾಸಿ ಸ್ಥಳಗಳಿವೆ. ಅದರ ಅಭಿವೃದ್ಧಿ ಆಗಬೇಕಿದೆ. ಇದಕ್ಕಾಗಿ ಬ್ರಾಂಡ್ ಬೆಂಗಳೂರು ಪ್ರಾಜೆಕ್ಟ್ ನಲ್ಲಿ ಪ್ಲಾನಿಂಗ್ ರೂಪಿಸಲಾಗಿದೆ ಎಂದರು. ಇನ್ನು ಇದೇ ವೇಳೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ನಾವು ಬರೀ ಸಿರಿವಂತರನ್ನು ಮಾತ್ರ ಇಟ್ಟುಕೊಂಡು ಪ್ರವಾಸೋದ್ಯಮ ಅಭಿವೃದ್ಧಿ ಮಾಡುತ್ತಿಲ್ಲ. ಮಧ್ಯಮ ವರ್ಗ ಮತ್ತು ಬಡವರ್ಗದ ಜನರಿಗೂ ಪ್ರವಾಸ ಅನುಕೂಲಕರವಾಗಬೇಕು. ಹೊರ ದೇಶದ ಅಥವಾ ಹೊರ ರಾಜ್ಯದ ಪ್ರವಾಸಿಗರನ್ನು ಆಕರ್ಷಿಸಬೇಕು ಅಂತ ಗ್ಯಾಂಬ್ಲಿಂಗ್, ಕೆಸಿನೋದಂತಹ ವಿಚಾರಗಳಿಗೂ ಪ್ರೋತ್ಸಾಹಿಸೋದು ಬೇಡ. ಸಾಮಾಜಿಕ ಕಾಳಜಿ ಜೊತೆ ಪ್ರವಾಸಿ ತಾಣಗಳನ್ನು ನಿರ್ಮಿಸೋಣ ಎಂದು ಹೂಡಿಕೆದಾರರಿಗೆ ಕಿವಿ ಮಾತು ಹೇಳಿದರು. 

ಇದನ್ನೂ ವೀಕ್ಷಿಸಿ:  ಫರ್ನಿಚರ್‌ ಹಾಗೂ ಲೈಫ್‌ ಸ್ಟೈಲ್‌ ಎಕ್ಸ್‌ ಪೋ..ಇಂದೇ ಭೇಟಿ ನೀಡಿ ನಿಮಗಿಷ್ಟವಾದ ಗೃಹಪಯೋಗಿ ವಸ್ತು ಖರೀದಿಸಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more