ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

Published : Jun 16, 2024, 11:14 AM IST

ಇಂದು ಕೂಡ ದಕ್ಷಿಣ ಭಾರತ ಉತ್ಸವ ನಡೆಯಲಿದ್ದು, ಹಲವಾರು ಒಡಂಬಡಿಕೆಗಳಿಗೆ ಇದು ಸಾಕ್ಷಿಯಾಗಲಿದೆ. ದಕ್ಷಿಣ ಭಾರತದ ಏಳು ರಾಜ್ಯಗಳ ಪ್ರವಾಸೋದ್ಯಮ ಅಭಿವೃದ್ದಿ ಕುರಿತು ವಿವಿಧ ಚರ್ಚೆಗಳು ನಡೆಯಲಿವೆ.

FKCCI ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಭಾರತ ಉತ್ಸವ -2024ಕ್ಕೆ ಚಾಲನೆ ಸಿಕ್ಕಿದೆ. ಇಂದು ಮತ್ತು ನಾಳೆ ನಡೆಯಲಿರುವ ಈ ಉತ್ಸವಕ್ಕೆ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಸಹಭಾಗಿತ್ವ ನೀಡುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ದೀಪ ಬೆಳಗುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ದಕ್ಷಿಣ ಭಾರತದ ಏಳು ರಾಜ್ಯಗಳ ಪ್ರವಾಸೋದ್ಯಮ ಇಲಾಖೆಯ ಪ್ರತಿನಿಧಿಗಳು ಸೇರಿದಂತೆ ದೇಶ ವಿದೇಶಗಳ ಗಣ್ಯರು, ಹೂಡಿಕೆದಾರರು ಈ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ದಕ್ಷಿಣ ಭಾರತದ ಪ್ರವಾಸೋದ್ಯಮ ಕ್ಷೇತ್ರವನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಉತ್ಸವ ನಡೆಯುತ್ತಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಹಲವಾರು ಜನ ಹೂಡಿಕೆದಾರರು ಪ್ರವಾಸೋದ್ಯಮಕ್ಕೆ ಹೂಡಿಕೆ ಮಾಡಲು ಮುಂದೆ ಬರುತ್ತಿದ್ದಾರೆ. ಅವರೆಲ್ಲರಿಗೂ ತೆರಿಗೆಯಲ್ಲಿ ವಿನಾಯಿತಿ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರಯತ್ನಿಸುತ್ತೇವೆ. ಬೆಂಗಳೂರು ಅಂದಾಕ್ಷಣ ಬರೀ ವಿಧಾನಸೌಧ ನೋಡಿ ಹೋಗ್ತಾರೆ. ಆದರೆ ಬೆಂಗಳೂರಿನಲ್ಲಿ ಇನ್ನೂ ಅನೇಕ ಪ್ರವಾಸಿ ಸ್ಥಳಗಳಿವೆ. ಅದರ ಅಭಿವೃದ್ಧಿ ಆಗಬೇಕಿದೆ. ಇದಕ್ಕಾಗಿ ಬ್ರಾಂಡ್ ಬೆಂಗಳೂರು ಪ್ರಾಜೆಕ್ಟ್ ನಲ್ಲಿ ಪ್ಲಾನಿಂಗ್ ರೂಪಿಸಲಾಗಿದೆ ಎಂದರು. ಇನ್ನು ಇದೇ ವೇಳೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ನಾವು ಬರೀ ಸಿರಿವಂತರನ್ನು ಮಾತ್ರ ಇಟ್ಟುಕೊಂಡು ಪ್ರವಾಸೋದ್ಯಮ ಅಭಿವೃದ್ಧಿ ಮಾಡುತ್ತಿಲ್ಲ. ಮಧ್ಯಮ ವರ್ಗ ಮತ್ತು ಬಡವರ್ಗದ ಜನರಿಗೂ ಪ್ರವಾಸ ಅನುಕೂಲಕರವಾಗಬೇಕು. ಹೊರ ದೇಶದ ಅಥವಾ ಹೊರ ರಾಜ್ಯದ ಪ್ರವಾಸಿಗರನ್ನು ಆಕರ್ಷಿಸಬೇಕು ಅಂತ ಗ್ಯಾಂಬ್ಲಿಂಗ್, ಕೆಸಿನೋದಂತಹ ವಿಚಾರಗಳಿಗೂ ಪ್ರೋತ್ಸಾಹಿಸೋದು ಬೇಡ. ಸಾಮಾಜಿಕ ಕಾಳಜಿ ಜೊತೆ ಪ್ರವಾಸಿ ತಾಣಗಳನ್ನು ನಿರ್ಮಿಸೋಣ ಎಂದು ಹೂಡಿಕೆದಾರರಿಗೆ ಕಿವಿ ಮಾತು ಹೇಳಿದರು. 

ಇದನ್ನೂ ವೀಕ್ಷಿಸಿ:  ಫರ್ನಿಚರ್‌ ಹಾಗೂ ಲೈಫ್‌ ಸ್ಟೈಲ್‌ ಎಕ್ಸ್‌ ಪೋ..ಇಂದೇ ಭೇಟಿ ನೀಡಿ ನಿಮಗಿಷ್ಟವಾದ ಗೃಹಪಯೋಗಿ ವಸ್ತು ಖರೀದಿಸಿ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more