Mangaluru: ಕಾರಿಂಜೇಶ್ವರ ದೇವಾಲಯದ ತಪ್ಪಲಿನಲ್ಲಿ ಕಲ್ಲುಗಣಿಗಾರಿಕೆ, ಹಿಂ.ಜಾ.ವೇ ಬೃಹತ್ ಹೋರಾಟ

Mangaluru: ಕಾರಿಂಜೇಶ್ವರ ದೇವಾಲಯದ ತಪ್ಪಲಿನಲ್ಲಿ ಕಲ್ಲುಗಣಿಗಾರಿಕೆ, ಹಿಂ.ಜಾ.ವೇ ಬೃಹತ್ ಹೋರಾಟ

Published : Nov 20, 2021, 05:51 PM IST

- ಕಾರಿಂಜೇಶ್ವರ ದೇವಾಲಯದ ತಪ್ಪಲಿನಲ್ಲಿ ಕಲ್ಲುಗಣಿಗಾರಿಕೆ..!

- ಬೃಹತ್ ಹೋರಾಟಕ್ಕೆ ವೇದಿಕೆ ಸಜ್ಜುಗೊಳಿಸಿದ ಹಿಂ.ಜಾ.ವೇ..!

- ಕಲ್ಲು ಗಣಿಗಾರಿಕೆ ಸ್ಟೋಟಕ್ಕೆ ಹತ್ತಾರು ಮನೆಗಳಲ್ಲಿ ಬಿರುಕು 
 

ಮಂಗಳೂರು (ನ. 20): ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬಂಟ್ವಾಳ (Bantawala) ತಾಲೂಕಿನ ವಗ್ಗ ಗ್ರಾಮದಲ್ಲಿ ಬರುವ ಪುಣ್ಯಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನ (Karinjeshwara Temple). ಪೌರಾಣಿಕ ಶಿವ ಕ್ಷೇತ್ರಕ್ಕೆ ತನ್ನದೆ ಆದ ಐತಿಹ್ಯವಿದ್ದು, ದೇವಸ್ಥಾನಕ್ಕೆ ತೆರಳಲು ಬರೊಬ್ಬರಿ 355 ಮೆಟ್ಟಿಲು ಹತ್ತಿ ಬಳಿಕ ಶಿವ ದರ್ಶನ ಮಾಡಬೇಕು. 

 ಕರಾವಳಿ ಭಾಗದಲ್ಲಿ ಈ ದೇವಸ್ಥಾನಕ್ಕೆ ವಿಶೇಷ ಮನ್ನಣೆಯಿದ್ದು ಆಟಿ ಮಾಸದಲ್ಲಿ ಇಲ್ಲಿಗೆ ಬಂದು ಪುಣ್ಯಸ್ನಾನ ಮಾಡಿ ಆಟಿ ಅಮವಾಸ್ಯೆ ಕಷಾಯ ಕುಡಿಯೋದು ವಾಡಿಕೆಯಾಗಿದೆ. ಇನ್ನು ಇಂತಹ ಕ್ಷೇತ್ರದ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ (Illegal mining) ನಡೆಯುತ್ತಿದ್ದು ಇದು ಕ್ಷೇತ್ರದಲ್ಲಿರೊ ದೇವಸ್ಥಾನಕ್ಕೆ ಧಕ್ಕೆ ತರುತ್ತಿದೆ ಅನ್ನೊ ಆರೋಪ ಕೇಳಿ ಬಂದಿದೆ.  ಈ ದೇವಸ್ಥಾನದ ಬುಡದಲ್ಲೇ ಭಾರೀ ಪ್ರಮಾಣದ ಸ್ಟೋಟಕ ಸಂಗ್ರಹ ಮಾಡಲಾಗಿದ್ದು, ಪೌರಾಣಿಕ ಶಿವ ಕ್ಷೇತ್ರದ ಬುಡದಲ್ಲೇ ಡೈನಾಮೆಟ್ ಇಟ್ಟು ಬಂಡೆ ಸ್ಟೋಟಿಸುತ್ತಾ ಇದ್ದಾರೆ. ಇದರ ಹಿಂದೆ ರಾಜಕೀಯ ಪ್ರಭಾವಿಗಳಿದ್ದಾರೆ ಎನ್ನಲಾಗುತ್ತಿದೆ. ಇದೇ ತಿಂಗಳು 21 ರಂದು ಕಾಲ್ನಡಿಗೆಯ ಮೂಲಕ ಭವ್ಯ ಶೋಭಾ ಯಾತ್ರೆ ಮಾಡಲಾಗುತ್ತೆ ಅಂತಾ ಹಿಂದು ಜಾಗರಣ ವೇದಿಕೆ ಹೇಳಿದೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more