ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

Published : Jun 06, 2020, 07:13 PM IST

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. 

ದಾಂಡೇಲಿ (ಜೂ. 06): ಕೇರಳದಲ್ಲಿ ಗರ್ಭಿಣಿ ಆನೆ ಸ್ಫೋಟಕ ತುಂಬಿದ ಹಣ್ಣು ತಿಂದು ಮೃತಪಟ್ಟ ಘಟನೆ ಇನ್ನೂ ಚರ್ಚೆಯಾಗುತ್ತಿದ್ದರೆ, ಕರ್ನಾಟಕದಲ್ಲಿ ಗಾಯಗೊಂಡ ಕೋತಿಗೆ ಮಾನವೀಯ ಸ್ಪರ್ಶ ಸಿಕ್ಕಿದೆ.  ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಕೋತಿಯೊಂದು ಸನ್ನೆಯಿಂದಲೇ ಗಾಯ ತೋರಿಸಿ ಔಷಧಿ ಹಚ್ಚಿಸಿಕೊಂಡು ತೆರಳಿದ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

ಹೌದು, ನಿನ್ನೆ ದಾಂಡೇಲಿಯ ಪಾಟೀಲ್ ಆಸ್ಪತ್ರೆಗೆ ಕೋತಿಯೊಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಚಾನಕ್ಕಾಗಿ ಕೋತಿಯೊಂದು ಬಂದು, ಆಸ್ಪತ್ರೆಯ ಮುಂಬಾಗಿಲಿನ ಮುಂದೆ ಮೆಟ್ಟಿಲಲ್ಲಿ ಕೂತೇ ಬಿಟ್ಟಿತ್ತು. ಆಸ್ಪತ್ರೆಯ ಸಿಬ್ಬಂದಿಗಳೆಲ್ಲ ಗಾಬರಿಯಾಗಿ ಓಡಿಸೆಲೆತ್ನಿಸಿದರೂ ಅದು ಧೈರ್ಯ ಮಾಡಿ ಚಿಕಿತ್ಸೆಗಾಗಿ ಕೂತಲ್ಲಿಂದ ಎದ್ದೇಳಲೇ ಇಲ್ಲ.

ಇದನ್ನೂ ನೋಡಿ | ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ...

ಕೊನೆಗೆ ಆಸ್ಪತ್ರೆಗೆಂದು ಬಂದಿದ್ದ ವ್ಯಕ್ತಿಯೋರ್ವರು ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಕೋತಿ ಗಾಯ ಮಾಡಿಕೊಂಡಿದ್ದ ಜಾಗಕ್ಕೆ ಔಷಧಿ ಹಚ್ಚಿದರು. ಸ್ವಲ್ಪ ಹೊತ್ತಿನ ಬಳಿಕ ಚಿಕಿತ್ಸೆ ಪಡೆದು ನಿಟ್ಟುಸಿರು ಬಿಟ್ಟ ಕೋತಿ ತನ್ನ ಪಾಡಿಗೆ ತಾನು ಹೊರಟು ಹೋಯಿತು. 

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!