ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

Suvarna News   | Asianet News
Published : Jun 06, 2020, 07:13 PM IST

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. 

ದಾಂಡೇಲಿ (ಜೂ. 06): ಕೇರಳದಲ್ಲಿ ಗರ್ಭಿಣಿ ಆನೆ ಸ್ಫೋಟಕ ತುಂಬಿದ ಹಣ್ಣು ತಿಂದು ಮೃತಪಟ್ಟ ಘಟನೆ ಇನ್ನೂ ಚರ್ಚೆಯಾಗುತ್ತಿದ್ದರೆ, ಕರ್ನಾಟಕದಲ್ಲಿ ಗಾಯಗೊಂಡ ಕೋತಿಗೆ ಮಾನವೀಯ ಸ್ಪರ್ಶ ಸಿಕ್ಕಿದೆ.  ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಕೋತಿಯೊಂದು ಸನ್ನೆಯಿಂದಲೇ ಗಾಯ ತೋರಿಸಿ ಔಷಧಿ ಹಚ್ಚಿಸಿಕೊಂಡು ತೆರಳಿದ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

ಹೌದು, ನಿನ್ನೆ ದಾಂಡೇಲಿಯ ಪಾಟೀಲ್ ಆಸ್ಪತ್ರೆಗೆ ಕೋತಿಯೊಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಚಾನಕ್ಕಾಗಿ ಕೋತಿಯೊಂದು ಬಂದು, ಆಸ್ಪತ್ರೆಯ ಮುಂಬಾಗಿಲಿನ ಮುಂದೆ ಮೆಟ್ಟಿಲಲ್ಲಿ ಕೂತೇ ಬಿಟ್ಟಿತ್ತು. ಆಸ್ಪತ್ರೆಯ ಸಿಬ್ಬಂದಿಗಳೆಲ್ಲ ಗಾಬರಿಯಾಗಿ ಓಡಿಸೆಲೆತ್ನಿಸಿದರೂ ಅದು ಧೈರ್ಯ ಮಾಡಿ ಚಿಕಿತ್ಸೆಗಾಗಿ ಕೂತಲ್ಲಿಂದ ಎದ್ದೇಳಲೇ ಇಲ್ಲ.

ಇದನ್ನೂ ನೋಡಿ | ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ...

ಕೊನೆಗೆ ಆಸ್ಪತ್ರೆಗೆಂದು ಬಂದಿದ್ದ ವ್ಯಕ್ತಿಯೋರ್ವರು ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಕೋತಿ ಗಾಯ ಮಾಡಿಕೊಂಡಿದ್ದ ಜಾಗಕ್ಕೆ ಔಷಧಿ ಹಚ್ಚಿದರು. ಸ್ವಲ್ಪ ಹೊತ್ತಿನ ಬಳಿಕ ಚಿಕಿತ್ಸೆ ಪಡೆದು ನಿಟ್ಟುಸಿರು ಬಿಟ್ಟ ಕೋತಿ ತನ್ನ ಪಾಡಿಗೆ ತಾನು ಹೊರಟು ಹೋಯಿತು. 

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್