ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

Suvarna News   | Asianet News
Published : Jun 06, 2020, 07:13 PM IST

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. 

ದಾಂಡೇಲಿ (ಜೂ. 06): ಕೇರಳದಲ್ಲಿ ಗರ್ಭಿಣಿ ಆನೆ ಸ್ಫೋಟಕ ತುಂಬಿದ ಹಣ್ಣು ತಿಂದು ಮೃತಪಟ್ಟ ಘಟನೆ ಇನ್ನೂ ಚರ್ಚೆಯಾಗುತ್ತಿದ್ದರೆ, ಕರ್ನಾಟಕದಲ್ಲಿ ಗಾಯಗೊಂಡ ಕೋತಿಗೆ ಮಾನವೀಯ ಸ್ಪರ್ಶ ಸಿಕ್ಕಿದೆ.  ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಕೋತಿಯೊಂದು ಸನ್ನೆಯಿಂದಲೇ ಗಾಯ ತೋರಿಸಿ ಔಷಧಿ ಹಚ್ಚಿಸಿಕೊಂಡು ತೆರಳಿದ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

ಹೌದು, ನಿನ್ನೆ ದಾಂಡೇಲಿಯ ಪಾಟೀಲ್ ಆಸ್ಪತ್ರೆಗೆ ಕೋತಿಯೊಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಚಾನಕ್ಕಾಗಿ ಕೋತಿಯೊಂದು ಬಂದು, ಆಸ್ಪತ್ರೆಯ ಮುಂಬಾಗಿಲಿನ ಮುಂದೆ ಮೆಟ್ಟಿಲಲ್ಲಿ ಕೂತೇ ಬಿಟ್ಟಿತ್ತು. ಆಸ್ಪತ್ರೆಯ ಸಿಬ್ಬಂದಿಗಳೆಲ್ಲ ಗಾಬರಿಯಾಗಿ ಓಡಿಸೆಲೆತ್ನಿಸಿದರೂ ಅದು ಧೈರ್ಯ ಮಾಡಿ ಚಿಕಿತ್ಸೆಗಾಗಿ ಕೂತಲ್ಲಿಂದ ಎದ್ದೇಳಲೇ ಇಲ್ಲ.

ಇದನ್ನೂ ನೋಡಿ | ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ...

ಕೊನೆಗೆ ಆಸ್ಪತ್ರೆಗೆಂದು ಬಂದಿದ್ದ ವ್ಯಕ್ತಿಯೋರ್ವರು ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಕೋತಿ ಗಾಯ ಮಾಡಿಕೊಂಡಿದ್ದ ಜಾಗಕ್ಕೆ ಔಷಧಿ ಹಚ್ಚಿದರು. ಸ್ವಲ್ಪ ಹೊತ್ತಿನ ಬಳಿಕ ಚಿಕಿತ್ಸೆ ಪಡೆದು ನಿಟ್ಟುಸಿರು ಬಿಟ್ಟ ಕೋತಿ ತನ್ನ ಪಾಡಿಗೆ ತಾನು ಹೊರಟು ಹೋಯಿತು. 

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!