ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

Suvarna News   | Asianet News
Published : Jun 06, 2020, 07:13 PM IST

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. 

ದಾಂಡೇಲಿ (ಜೂ. 06): ಕೇರಳದಲ್ಲಿ ಗರ್ಭಿಣಿ ಆನೆ ಸ್ಫೋಟಕ ತುಂಬಿದ ಹಣ್ಣು ತಿಂದು ಮೃತಪಟ್ಟ ಘಟನೆ ಇನ್ನೂ ಚರ್ಚೆಯಾಗುತ್ತಿದ್ದರೆ, ಕರ್ನಾಟಕದಲ್ಲಿ ಗಾಯಗೊಂಡ ಕೋತಿಗೆ ಮಾನವೀಯ ಸ್ಪರ್ಶ ಸಿಕ್ಕಿದೆ.  ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಕೋತಿಯೊಂದು ಸನ್ನೆಯಿಂದಲೇ ಗಾಯ ತೋರಿಸಿ ಔಷಧಿ ಹಚ್ಚಿಸಿಕೊಂಡು ತೆರಳಿದ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

ಹೌದು, ನಿನ್ನೆ ದಾಂಡೇಲಿಯ ಪಾಟೀಲ್ ಆಸ್ಪತ್ರೆಗೆ ಕೋತಿಯೊಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಚಾನಕ್ಕಾಗಿ ಕೋತಿಯೊಂದು ಬಂದು, ಆಸ್ಪತ್ರೆಯ ಮುಂಬಾಗಿಲಿನ ಮುಂದೆ ಮೆಟ್ಟಿಲಲ್ಲಿ ಕೂತೇ ಬಿಟ್ಟಿತ್ತು. ಆಸ್ಪತ್ರೆಯ ಸಿಬ್ಬಂದಿಗಳೆಲ್ಲ ಗಾಬರಿಯಾಗಿ ಓಡಿಸೆಲೆತ್ನಿಸಿದರೂ ಅದು ಧೈರ್ಯ ಮಾಡಿ ಚಿಕಿತ್ಸೆಗಾಗಿ ಕೂತಲ್ಲಿಂದ ಎದ್ದೇಳಲೇ ಇಲ್ಲ.

ಇದನ್ನೂ ನೋಡಿ | ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ...

ಕೊನೆಗೆ ಆಸ್ಪತ್ರೆಗೆಂದು ಬಂದಿದ್ದ ವ್ಯಕ್ತಿಯೋರ್ವರು ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಕೋತಿ ಗಾಯ ಮಾಡಿಕೊಂಡಿದ್ದ ಜಾಗಕ್ಕೆ ಔಷಧಿ ಹಚ್ಚಿದರು. ಸ್ವಲ್ಪ ಹೊತ್ತಿನ ಬಳಿಕ ಚಿಕಿತ್ಸೆ ಪಡೆದು ನಿಟ್ಟುಸಿರು ಬಿಟ್ಟ ಕೋತಿ ತನ್ನ ಪಾಡಿಗೆ ತಾನು ಹೊರಟು ಹೋಯಿತು. 

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್