ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

Suvarna News   | Asianet News
Published : Jun 06, 2020, 07:13 PM IST

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. 

ದಾಂಡೇಲಿ (ಜೂ. 06): ಕೇರಳದಲ್ಲಿ ಗರ್ಭಿಣಿ ಆನೆ ಸ್ಫೋಟಕ ತುಂಬಿದ ಹಣ್ಣು ತಿಂದು ಮೃತಪಟ್ಟ ಘಟನೆ ಇನ್ನೂ ಚರ್ಚೆಯಾಗುತ್ತಿದ್ದರೆ, ಕರ್ನಾಟಕದಲ್ಲಿ ಗಾಯಗೊಂಡ ಕೋತಿಗೆ ಮಾನವೀಯ ಸ್ಪರ್ಶ ಸಿಕ್ಕಿದೆ.  ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಕೋತಿಯೊಂದು ಸನ್ನೆಯಿಂದಲೇ ಗಾಯ ತೋರಿಸಿ ಔಷಧಿ ಹಚ್ಚಿಸಿಕೊಂಡು ತೆರಳಿದ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

ಹೌದು, ನಿನ್ನೆ ದಾಂಡೇಲಿಯ ಪಾಟೀಲ್ ಆಸ್ಪತ್ರೆಗೆ ಕೋತಿಯೊಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಚಾನಕ್ಕಾಗಿ ಕೋತಿಯೊಂದು ಬಂದು, ಆಸ್ಪತ್ರೆಯ ಮುಂಬಾಗಿಲಿನ ಮುಂದೆ ಮೆಟ್ಟಿಲಲ್ಲಿ ಕೂತೇ ಬಿಟ್ಟಿತ್ತು. ಆಸ್ಪತ್ರೆಯ ಸಿಬ್ಬಂದಿಗಳೆಲ್ಲ ಗಾಬರಿಯಾಗಿ ಓಡಿಸೆಲೆತ್ನಿಸಿದರೂ ಅದು ಧೈರ್ಯ ಮಾಡಿ ಚಿಕಿತ್ಸೆಗಾಗಿ ಕೂತಲ್ಲಿಂದ ಎದ್ದೇಳಲೇ ಇಲ್ಲ.

ಇದನ್ನೂ ನೋಡಿ | ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ...

ಕೊನೆಗೆ ಆಸ್ಪತ್ರೆಗೆಂದು ಬಂದಿದ್ದ ವ್ಯಕ್ತಿಯೋರ್ವರು ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಕೋತಿ ಗಾಯ ಮಾಡಿಕೊಂಡಿದ್ದ ಜಾಗಕ್ಕೆ ಔಷಧಿ ಹಚ್ಚಿದರು. ಸ್ವಲ್ಪ ಹೊತ್ತಿನ ಬಳಿಕ ಚಿಕಿತ್ಸೆ ಪಡೆದು ನಿಟ್ಟುಸಿರು ಬಿಟ್ಟ ಕೋತಿ ತನ್ನ ಪಾಡಿಗೆ ತಾನು ಹೊರಟು ಹೋಯಿತು. 

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!