ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

Published : Jun 24, 2024, 05:30 PM ISTUpdated : Jun 24, 2024, 05:31 PM IST

ವಿಲ್ಸನ್ ಗಾರ್ಡನ್ ನಾಗನ ಭೇಟಿ‌ಗೆ ಜೈಲು ಅಧಿಕಾರಿಗಳ ಬಳಿ ನಟ ದರ್ಶನ್‌ ಪಟ್ಟು ಹಿಡಿದಿದ್ದಾರಂತೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು ಮುಂದಾಗಿದ್ದಾರೆ.

ನಟ ದರ್ಶನ್‌ಗೆ ಸಂಬಂಧಿಸಿದ ಮತ್ತೊಂದು ಎಕ್ಸ್‌ಕ್ಲೂಸಿವ್‌ ಸುದ್ದಿ ನಿಮ್ಮ ಏಷ್ಯಾನೆಟ್‌ ಸುವರ್ಣನ್ಯೂಸ್ ಬ್ರೇಕ್ ಮಾಡ್ತಿದೆ. ಜೈಲಿನಲ್ಲಿ ಯಾರನ್ನೋ ಭೇಟಿ‌ ಮಾಡಲು ನಟ ದರ್ಶನ್‌ (Darshan) ಹಾತೊರೆಯುತ್ತಿದ್ದಾರಂತೆ. ಆ ರೌಡಿ ಭೇಟಿ ಮಾಡಲು ಅವಕಾಶ ಕೊಡಿ ಎಂದು ಅಧಿಕಾರಿಗಳ ಬಳಿ ದರ್ಶನ್ ಪಟ್ಟು ಹಿಡಿದಿದ್ದಾರಂತೆ. ಜೈಲಿಗೆ  ಹೋದ ಕ್ಷಣದಿಂದ ಜೈಲು ಅಧಿಕಾರಿಗಯನ್ನು ಭೇಟಿಗೆ ಬೇಡಿಕೊಳ್ಳುತ್ತಿದ್ದಾರಂತೆ. ಆದ್ರೆ ನಟೋರಿಯಸ್ ರೌಡಿ ಭೇಟಿಗೆ ಅವಕಾಶವನ್ನು ಜೈಲು ಅಧಿಕಾರಿಗಳು ಮಾಡಿಕೊಡುತ್ತಿಲ್ಲ. ಈವರೆಗೂ ಆ ರೌಡಿ ಭೇಟಿಗೆ ಅವಕಾಶ ನೀಡದ ಜೈಲು ಅಧಿಕಾರಿಗಳು. ವಿಲ್ಸನ್ ಗಾರ್ಡನ್ ನಾಗನನ್ನ(Wilson Garden Naga) ಭೇಟಿ‌ಮಾಡಲು ನಟ ದರ್ಶನ್ ಕಾತರವಾಗಿದ್ದು, ಸದ್ಯ ರೌಡಿ ಮಹೇಶನ ಕೊಲೆ ‌ಕೇಸ್‌ನಲ್ಲಿ ವಿಲ್ಸನ್ ಗಾರ್ಡನ್ ನಾಗ ಜೈಲು ಸೇರಿದ್ದಾನೆ. ಕಳೆದ 10 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗ ಇದ್ದಾನೆ. ನಾಗನ ವಿರುದ್ಧ ಕೊಲೆ, ಕೊಲೆಯತ್ನ, ಸುಲಿಗೆ ಸೇರಿ 15 ಕ್ಕೂ ಹೆಚ್ಚು ಕೇಸ್ ಗಳು ಇವೆ. ಯಾವ ಕಾರಣಕ್ಕೆ ನಾಗನ ಭೇಟಿಗೆ ನಟ ದರ್ಶನ್ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಲು ಬೆಂಗಳೂರು ‌ಪೊಲೀಸರು (Bengaluru police) ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಸಹವಾಸ ದೋಷದಿಂದಲೇ ದರ್ಶನ್‌ಗೆ ಈ ಗತಿ ಬಂತಾ..? ಅಭಿಮಾನ ಇರಬೇಕು..ಅಂಧಾಭಿಮಾನ ಇರಬಾರದು..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more