ಬರದ ನಡುವೆ ನಿಲ್ಲದ ಶಾಸಕರ ವಿದೇಶ ಪ್ರವಾಸ: ಗೆದ್ದ 5 ತಿಂಗಳಲ್ಲಿ 3ನೇ ಬಾರಿ ವಿದೇಶಕ್ಕೆ ದರ್ಶನ್ ಪುಟ್ಟಣ್ಣಯ್ಯ

ಬರದ ನಡುವೆ ನಿಲ್ಲದ ಶಾಸಕರ ವಿದೇಶ ಪ್ರವಾಸ: ಗೆದ್ದ 5 ತಿಂಗಳಲ್ಲಿ 3ನೇ ಬಾರಿ ವಿದೇಶಕ್ಕೆ ದರ್ಶನ್ ಪುಟ್ಟಣ್ಣಯ್ಯ

Published : Nov 03, 2023, 12:19 PM IST

ಒಮ್ಮೆ ವಿದೇಶಕ್ಕೆ ಹೋದರೆ ತಿಂಗಳುಗಟ್ಟಲೆ ಕ್ಷೇತ್ರಕ್ಕೆ ಬರಲ್ಲ
ಇಲ್ಲೇ ಇದ್ದು ಜನರ ಸಮಸ್ಯೆಗೆ ಸ್ಪಂದಿಸಲಿ ಎಂದು ಗೆಲ್ಲಿಸಿದ್ದೇವೆ
ವೈಯಕ್ತಿಕ ಕಾರಣ ನೀಡಿ ಪದೇ ಪದೇ ವಿದೇಶಕ್ಕೆ ಹೋಗ್ತಿದ್ದಾರೆ
ಆಕ್ರೋಶವನ್ನು ವ್ಯಕ್ತಪಡಿಸಿದ ಮೇಲುಕೋಟೆ ಕ್ಷೇತ್ರದ ಜನರು

ಬರ ಇದ್ದರೂ ಶಾಸಕರ ವಿದೇಶ ಪ್ರವಾಸ ಮಾತ್ರ ನಿಂತಿಲ್ಲ. ಗೆದ್ದ 5 ತಿಂಗಳಲ್ಲಿ ಮೂರನೇ ಬಾರಿಗೆ ವಿದೇಶ ಪ್ರವಾಸಕ್ಕೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ(MLA Darshan Puttannaiah) ಹೋಗಿದ್ದಾರೆ. ಇವರು ಮೇಲುಕೋಟೆ(Melukote) ಶಾಸಕರಾಗಿದ್ದು, ಇವರ ನಡೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಚುನಾವಣೆ ವೇಳೆ ಕ್ಷೇತ್ರದಲ್ಲೇ ಇರುವುದಾಗಿ ಭರವಸೆಯನ್ನು ದರ್ಶನ್ ಪುಟ್ಟಣ್ಣಯ್ಯ ನೀಡಿದ್ದರು. ಅಲ್ಲದೇ ಅಮೆರಿಕಾದಲ್ಲಿನ(America) ತನ್ನ ಕಂಪನಿ ಮಾರಿ ಹುಟ್ಟೂರಲ್ಲೇ ಇರುವುದಾಗಿ ಭರವಸೆ ನೀಡಿದ್ದರು. ಆದರೆ ಗೆದ್ದ ಕೆಲವೇ ದಿನಗಳಲ್ಲಿ ಅಮೆರಿಕಾಕ್ಕೆ ದರ್ಶನ್ ಪುಟ್ಟಣ್ಣಯ್ಯ ತೆರಳಿದ್ದಾರೆ. ಆಗ ವಾಪಸ್‌ ಬಂದ ಬಳಿಕ ಕ್ಷೇತ್ರದ ಜನರ ಬಳಿ ಕ್ಷಮೆಯಾಚಿಸಿ, ಮತ್ತೆ ವಿದೇಶಕ್ಕೆ ಹೋಗಲ್ಲ ಎಂದಿದ್ದರು. ಕಳೆದ ಆಗಸ್ಟ್‌ನಲ್ಲೂ ವಿದೇಶಕ್ಕೆ ತೆರಳಿ ಸ್ವತಂತ್ರ ದಿನಾಚರಣೆಗೆ ಗೈರಾಗಿದ್ದರು. ಶಾಸಕರ ಅನುಪಸ್ಥಿತಿಯಲ್ಲಿ ಸ್ವತಂತ್ರ ದಿನಾಚರಣೆ ನಡೆದಿತ್ತು. ಈಗ ಮತ್ತೆ ಒಂದು ವಾರದ ಹಿಂದೆ ಅಮೆರಿಕಾಕ್ಕೆ ದರ್ಶನ್ಹೋಗಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಗೈರಾಗಿದ್ದಾರೆ. ಕಾವೇರಿ ಸಮಸ್ಯೆ, ಬರ, ಕರೆಂಟ್ ಹೀಗೆ ಸಾಲು ಸಾಲು ಸಮಸ್ಯೆ ಇದ್ದರೂ,ಅವರ ಈ ನಡೆಗೆ ಕ್ಷೇತ್ರದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರು ಸಂಕಷ್ಟಕ್ಕೆ ಸಿಲುಕಿದ್ರು: ಜಮೀರ್ ಅಹಮ್ಮದ್ ಖಾನ್

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more