ಬರದ ನಡುವೆ ನಿಲ್ಲದ ಶಾಸಕರ ವಿದೇಶ ಪ್ರವಾಸ: ಗೆದ್ದ 5 ತಿಂಗಳಲ್ಲಿ 3ನೇ ಬಾರಿ ವಿದೇಶಕ್ಕೆ ದರ್ಶನ್ ಪುಟ್ಟಣ್ಣಯ್ಯ

ಬರದ ನಡುವೆ ನಿಲ್ಲದ ಶಾಸಕರ ವಿದೇಶ ಪ್ರವಾಸ: ಗೆದ್ದ 5 ತಿಂಗಳಲ್ಲಿ 3ನೇ ಬಾರಿ ವಿದೇಶಕ್ಕೆ ದರ್ಶನ್ ಪುಟ್ಟಣ್ಣಯ್ಯ

Published : Nov 03, 2023, 12:19 PM IST

ಒಮ್ಮೆ ವಿದೇಶಕ್ಕೆ ಹೋದರೆ ತಿಂಗಳುಗಟ್ಟಲೆ ಕ್ಷೇತ್ರಕ್ಕೆ ಬರಲ್ಲ
ಇಲ್ಲೇ ಇದ್ದು ಜನರ ಸಮಸ್ಯೆಗೆ ಸ್ಪಂದಿಸಲಿ ಎಂದು ಗೆಲ್ಲಿಸಿದ್ದೇವೆ
ವೈಯಕ್ತಿಕ ಕಾರಣ ನೀಡಿ ಪದೇ ಪದೇ ವಿದೇಶಕ್ಕೆ ಹೋಗ್ತಿದ್ದಾರೆ
ಆಕ್ರೋಶವನ್ನು ವ್ಯಕ್ತಪಡಿಸಿದ ಮೇಲುಕೋಟೆ ಕ್ಷೇತ್ರದ ಜನರು

ಬರ ಇದ್ದರೂ ಶಾಸಕರ ವಿದೇಶ ಪ್ರವಾಸ ಮಾತ್ರ ನಿಂತಿಲ್ಲ. ಗೆದ್ದ 5 ತಿಂಗಳಲ್ಲಿ ಮೂರನೇ ಬಾರಿಗೆ ವಿದೇಶ ಪ್ರವಾಸಕ್ಕೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ(MLA Darshan Puttannaiah) ಹೋಗಿದ್ದಾರೆ. ಇವರು ಮೇಲುಕೋಟೆ(Melukote) ಶಾಸಕರಾಗಿದ್ದು, ಇವರ ನಡೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಚುನಾವಣೆ ವೇಳೆ ಕ್ಷೇತ್ರದಲ್ಲೇ ಇರುವುದಾಗಿ ಭರವಸೆಯನ್ನು ದರ್ಶನ್ ಪುಟ್ಟಣ್ಣಯ್ಯ ನೀಡಿದ್ದರು. ಅಲ್ಲದೇ ಅಮೆರಿಕಾದಲ್ಲಿನ(America) ತನ್ನ ಕಂಪನಿ ಮಾರಿ ಹುಟ್ಟೂರಲ್ಲೇ ಇರುವುದಾಗಿ ಭರವಸೆ ನೀಡಿದ್ದರು. ಆದರೆ ಗೆದ್ದ ಕೆಲವೇ ದಿನಗಳಲ್ಲಿ ಅಮೆರಿಕಾಕ್ಕೆ ದರ್ಶನ್ ಪುಟ್ಟಣ್ಣಯ್ಯ ತೆರಳಿದ್ದಾರೆ. ಆಗ ವಾಪಸ್‌ ಬಂದ ಬಳಿಕ ಕ್ಷೇತ್ರದ ಜನರ ಬಳಿ ಕ್ಷಮೆಯಾಚಿಸಿ, ಮತ್ತೆ ವಿದೇಶಕ್ಕೆ ಹೋಗಲ್ಲ ಎಂದಿದ್ದರು. ಕಳೆದ ಆಗಸ್ಟ್‌ನಲ್ಲೂ ವಿದೇಶಕ್ಕೆ ತೆರಳಿ ಸ್ವತಂತ್ರ ದಿನಾಚರಣೆಗೆ ಗೈರಾಗಿದ್ದರು. ಶಾಸಕರ ಅನುಪಸ್ಥಿತಿಯಲ್ಲಿ ಸ್ವತಂತ್ರ ದಿನಾಚರಣೆ ನಡೆದಿತ್ತು. ಈಗ ಮತ್ತೆ ಒಂದು ವಾರದ ಹಿಂದೆ ಅಮೆರಿಕಾಕ್ಕೆ ದರ್ಶನ್ಹೋಗಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಗೈರಾಗಿದ್ದಾರೆ. ಕಾವೇರಿ ಸಮಸ್ಯೆ, ಬರ, ಕರೆಂಟ್ ಹೀಗೆ ಸಾಲು ಸಾಲು ಸಮಸ್ಯೆ ಇದ್ದರೂ,ಅವರ ಈ ನಡೆಗೆ ಕ್ಷೇತ್ರದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರು ಸಂಕಷ್ಟಕ್ಕೆ ಸಿಲುಕಿದ್ರು: ಜಮೀರ್ ಅಹಮ್ಮದ್ ಖಾನ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more