ಬರದ ನಡುವೆ ನಿಲ್ಲದ ಶಾಸಕರ ವಿದೇಶ ಪ್ರವಾಸ: ಗೆದ್ದ 5 ತಿಂಗಳಲ್ಲಿ 3ನೇ ಬಾರಿ ವಿದೇಶಕ್ಕೆ ದರ್ಶನ್ ಪುಟ್ಟಣ್ಣಯ್ಯ

ಬರದ ನಡುವೆ ನಿಲ್ಲದ ಶಾಸಕರ ವಿದೇಶ ಪ್ರವಾಸ: ಗೆದ್ದ 5 ತಿಂಗಳಲ್ಲಿ 3ನೇ ಬಾರಿ ವಿದೇಶಕ್ಕೆ ದರ್ಶನ್ ಪುಟ್ಟಣ್ಣಯ್ಯ

Published : Nov 03, 2023, 12:19 PM IST

ಒಮ್ಮೆ ವಿದೇಶಕ್ಕೆ ಹೋದರೆ ತಿಂಗಳುಗಟ್ಟಲೆ ಕ್ಷೇತ್ರಕ್ಕೆ ಬರಲ್ಲ
ಇಲ್ಲೇ ಇದ್ದು ಜನರ ಸಮಸ್ಯೆಗೆ ಸ್ಪಂದಿಸಲಿ ಎಂದು ಗೆಲ್ಲಿಸಿದ್ದೇವೆ
ವೈಯಕ್ತಿಕ ಕಾರಣ ನೀಡಿ ಪದೇ ಪದೇ ವಿದೇಶಕ್ಕೆ ಹೋಗ್ತಿದ್ದಾರೆ
ಆಕ್ರೋಶವನ್ನು ವ್ಯಕ್ತಪಡಿಸಿದ ಮೇಲುಕೋಟೆ ಕ್ಷೇತ್ರದ ಜನರು

ಬರ ಇದ್ದರೂ ಶಾಸಕರ ವಿದೇಶ ಪ್ರವಾಸ ಮಾತ್ರ ನಿಂತಿಲ್ಲ. ಗೆದ್ದ 5 ತಿಂಗಳಲ್ಲಿ ಮೂರನೇ ಬಾರಿಗೆ ವಿದೇಶ ಪ್ರವಾಸಕ್ಕೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ(MLA Darshan Puttannaiah) ಹೋಗಿದ್ದಾರೆ. ಇವರು ಮೇಲುಕೋಟೆ(Melukote) ಶಾಸಕರಾಗಿದ್ದು, ಇವರ ನಡೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಚುನಾವಣೆ ವೇಳೆ ಕ್ಷೇತ್ರದಲ್ಲೇ ಇರುವುದಾಗಿ ಭರವಸೆಯನ್ನು ದರ್ಶನ್ ಪುಟ್ಟಣ್ಣಯ್ಯ ನೀಡಿದ್ದರು. ಅಲ್ಲದೇ ಅಮೆರಿಕಾದಲ್ಲಿನ(America) ತನ್ನ ಕಂಪನಿ ಮಾರಿ ಹುಟ್ಟೂರಲ್ಲೇ ಇರುವುದಾಗಿ ಭರವಸೆ ನೀಡಿದ್ದರು. ಆದರೆ ಗೆದ್ದ ಕೆಲವೇ ದಿನಗಳಲ್ಲಿ ಅಮೆರಿಕಾಕ್ಕೆ ದರ್ಶನ್ ಪುಟ್ಟಣ್ಣಯ್ಯ ತೆರಳಿದ್ದಾರೆ. ಆಗ ವಾಪಸ್‌ ಬಂದ ಬಳಿಕ ಕ್ಷೇತ್ರದ ಜನರ ಬಳಿ ಕ್ಷಮೆಯಾಚಿಸಿ, ಮತ್ತೆ ವಿದೇಶಕ್ಕೆ ಹೋಗಲ್ಲ ಎಂದಿದ್ದರು. ಕಳೆದ ಆಗಸ್ಟ್‌ನಲ್ಲೂ ವಿದೇಶಕ್ಕೆ ತೆರಳಿ ಸ್ವತಂತ್ರ ದಿನಾಚರಣೆಗೆ ಗೈರಾಗಿದ್ದರು. ಶಾಸಕರ ಅನುಪಸ್ಥಿತಿಯಲ್ಲಿ ಸ್ವತಂತ್ರ ದಿನಾಚರಣೆ ನಡೆದಿತ್ತು. ಈಗ ಮತ್ತೆ ಒಂದು ವಾರದ ಹಿಂದೆ ಅಮೆರಿಕಾಕ್ಕೆ ದರ್ಶನ್ಹೋಗಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಗೈರಾಗಿದ್ದಾರೆ. ಕಾವೇರಿ ಸಮಸ್ಯೆ, ಬರ, ಕರೆಂಟ್ ಹೀಗೆ ಸಾಲು ಸಾಲು ಸಮಸ್ಯೆ ಇದ್ದರೂ,ಅವರ ಈ ನಡೆಗೆ ಕ್ಷೇತ್ರದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರು ಸಂಕಷ್ಟಕ್ಕೆ ಸಿಲುಕಿದ್ರು: ಜಮೀರ್ ಅಹಮ್ಮದ್ ಖಾನ್

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more