ಮಂಗಳೂರಿನಲ್ಲಿ ಭುಗಿಲೆದ್ದ ಮತ್ತೊಂದು ವಿವಾದ: ದಸರಾ ದಾಂಡಿಯಾ ನೈಟ್ಸ್‌ಗೆ ಹಿಂದೂ ಸಂಘಟನೆಗಳ ಕಿಡಿ

ಮಂಗಳೂರಿನಲ್ಲಿ ಭುಗಿಲೆದ್ದ ಮತ್ತೊಂದು ವಿವಾದ: ದಸರಾ ದಾಂಡಿಯಾ ನೈಟ್ಸ್‌ಗೆ ಹಿಂದೂ ಸಂಘಟನೆಗಳ ಕಿಡಿ

Published : Oct 21, 2023, 10:55 AM IST

ವ್ಯಾಪಾರ ದಂಗಲ್ ಬಳಿಕ ಮಂಗಳೂರಿನಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ನವರಾತ್ರಿ ಸಂದರ್ಭ ಧಾಮ್ ಧೂಮ್ ಆಗಿ ನಡೆಯುವ ದಾಂಡಿಯಾ ನೈಟ್ಸ್ ಇವೆಂಟ್ ಗಳಿಗೆ  ಕಡಿವಾಣ ಹಾಕಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿದೆ.
 

ಕೋಮು ಸೂಕ್ಷ್ಮ ಪ್ರದೇಶವೆಂಬ ಹಣೆ ಪಟ್ಟಿ ಹೊತ್ತಿರುವ ಕಡಲನಗರಿ ಮಂಗಳೂರು(Mangaluru) ನವರಾತ್ರಿ ಸಂದರ್ಭದಲ್ಲಿ ಒಂದಲ್ಲ ಒಂದು ವಿವಾದಗಳಿಂದ ಸದ್ದು ಮಾಡುತ್ತಿದೆ. ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ವ್ಯಾಪಾರ ದಂಗಲ್ ಹಾಗೂ ಧ್ವಜ ವಿವಾದದ ಬಳಿಕ ಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ. ನವರಾತ್ರಿ ಪ್ರಯುಕ್ತ ನಗರ ಹಲವು ಪ್ರತಿಷ್ಠಿತ ಹೋಟೆಲ್, ಮಾಲ್ ಗಳಲ್ಲಿ ಧಾಮ್ ಧೂಮ್ ಆಗಿ ನಡೆಯುವ ಉತ್ತರ ಭಾರತ ದಾಂಡಿಯಾ ಶೈಲಿಯ ದಾಂಡಿಯಾ ನೈಟ್ಸ್ ಇವೆಂಟ್ ಗಳು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಘಟನೆಯ ಕಣ್ಣು ಕೆಂಪಾಗಾಗಿಸಿದ್ದು, ದಾಂಡಿಯಾ ನೈಟ್ಸ್ ಇವೆಂಟ್ಸ್ಗೆ(Dasara Dandiya dance event) ಅನುಮತಿ ನೀಡದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮನವಿ ಮಾಡಿದೆ. ನವರಾತ್ರಿ ಸಂದರ್ಭ ಉತ್ತರ ಭಾರತದಲ್ಲಿ(North India) ಗರ್ಭ ಹೆಸರಿನಲ್ಲಿ ನಡೆಯುವ ದಾಂಡಿಯಾ ನೃತ್ಯ ಪವಿತ್ರ ಧಾರ್ಮಿಕ ಕಾರ್ಯಕ್ರಮವಾಗಿದೆ. ಆದ್ರೆ ಪ್ರಸ್ತುತ ವರ್ಷಗಳಲ್ಲಿ ನಗರದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ, ಡ್ರಗ್ಸ್, ಮಾದಕ ದ್ರವ್ಯ ಸೇವನೆ ಮತ್ತು ಅಸಭ್ಯ ನೃತ್ಯಗಳ ಬಗ್ಗೆ ದೂರುಗಳು ಬಂದಿದ್ದು, ಈ ನಿಟ್ಟಿನಲ್ಲಿ ದಾಂಡಿಯಾ ನೈಟ್ಸ್ ಗೆ ಅವಕಾಶ ನೀಡಬಾರದು ಎಂದು ಬಜರಂಗದಳ ಮನವಿ ಮಾಡಿತ್ತು.‌ ದಾಂಡಿಯಾ ಹೆಸರಿನಲ್ಲಿ ನಡೆಯುವ ಮೋಜು ಮಸ್ತಿಯ ಇವೆಂಟ್ಗಳಿಗೆ ಅವಕಾಶ ನೀಡಿದ್ರೆಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದೆ.ಈ ನಡುವೆ ಇನ್ನೆರಡು ದಿನ ಮಂಗಳೂರಿನ ಸುಮಾರು 20ಕ್ಕೂ ಅಧಿಕ ಪ್ರದೇಶದಲ್ಲಿ ದಾಂಡಿಯಾ ನೈಟ್ಸ್ ಆಯೋಜನೆಗೊಂಡಿದೆ. 

ಇದನ್ನೂ ವೀಕ್ಷಿಸಿ:  15ನೇ ದಿನವೂ ರಣರಂಗದಲ್ಲಿ ಇಸ್ರೇಲ್ ಗುಂಡಿನ ಮಳೆ: ಗಾಜಾದ ಮತ್ತೊಂದು ಮಸೀದಿ ಉಡೀಸ್‌

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!