Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Chikkamagaluru: ಇನಾಂ ದತ್ತಾತ್ರೇಯ ಪೀಠದಲ್ಲಿ 10 ದಿನಗಳ ದತ್ತಜಯಂತಿಗೆ ಚಾಲನೆ

Published : Dec 12, 2021, 04:13 PM ISTUpdated : Dec 12, 2021, 05:13 PM IST

ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. 

ಚಿಕ್ಕಮಗಳೂರು (ಡಿ. 12): ಕಾಫಿನಾಡ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿಗೆ (Datta Jayanti) ಅಧಿಕೃತ ಚಾಲನೆ ದೊರೆತಿದೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಭಕ್ತರು, ಚಿಕ್ಕಮಗಳೂರಿನಲ್ಲಿ (Chikkamagaluru) 200 ಕ್ಕೂ ಅಧಿಕ ದತ್ತಭಕ್ತರು ಮಾಲಾಧಾರಣೆ ಮಾಡಿದರು. ಶಾಸಕ ಸಿ.ಟಿ.ರವಿ ಕೂಡ ಮಾಲಾಧಾರಣೆ ಕಾರ್ಯಕ್ರಮಕ್ಕೆ ಬಂದಿದ್ದು, ವೈಯಕ್ತಿಕ ಕಾರಣಗಳಿಂದ ಎರಡು ದಿನಗಳ ಬಳಿಕ ಮಾಲೆ ಹಾಕುತ್ತೇನೆ ಎಂದಿದ್ದಾರೆ. ಇಂದಿನಿಂದ 12 ದಿನಗಳ ಕಾಲ ಕಾಫಿನಾಡು ಬೂದಿಮುಚ್ಚಿದ ಕೆಂಡದಂತಿದ್ದು, ಜಿಲ್ಲಾಡಳಿತ ಕೂಡ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಟಿದೆ. 

ಡಿಸೆಂಬರ್ 17ಕ್ಕೆ ಅನುಸೂಯ ಜಯಂತಿ, 18ರಂದು ಬೃಹತ್ ಶೋಭಾಯಾತ್ರೆ ಹಾಗೂ 19ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಸರ್ಕಾರ ಕೂಡಲೇ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗಬೇಕು. ಈ ದತ್ತಜಯಂತಿಯಲ್ಲಿ ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಅನ್ನೋದು ದತ್ತಭಕ್ತರ ಆಗ್ರಹವಾಗಿದೆ. ನಮ್ಮಗಳ ಆಗ್ರಹ ಈಗಲೇ ಆಗಬೇಕೆಂದು ಇದೆ. ಚುನಾವಣೆ ಬಂದಿದ್ದರಿಂದ ತಡವಾಗಿದೆ. ಇದೇ ದತ್ತಜಯಂತಿಯಂದು ದತ್ತಪೀಠದಲ್ಲಿ ಹಿಂದೂಗಳಿಂದಲೇ ಪೂಜೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. 
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!