ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!

ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!

Published : Feb 25, 2026, 02:26 PM IST

ದಾವಣಗೆರೆಯ ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆಯಲ್ಲಿ, ಕಿಡಿಗೇಡಿ ಯುವಕರ ಗುಂಪೊಂದು ಬಲಿ ಕೊಟ್ಟ ಪ್ರಾಣಿಗಳ ಕಾಲುಗಳಿಂದ ಭಕ್ತರ ಮೇಲೆ ಭೀಕರವಾಗಿ ಹಲ್ಲೆ ನಡೆಸಿದೆ. ಈ ದಾಳಿಯಿಂದ ಭಕ್ತರು ದಿಕ್ಕಾಪಾಲಾಗಿ ಓಡಿದ್ದು, ಪುಂಡರು ಅಂಗಡಿ ಮುಂಗಟ್ಟುಗಳನ್ನೂ ಜಖಂಗೊಳಿಸಿದ್ದಾರೆ.

ದಾವಣಗೆರೆ ನಗರದ ಆರಾಧ್ಯ ದೈವ, ಶಕ್ತಿ ದೇವತೆ ಶ್ರೀ ದುರ್ಗಾಂಭಿಕಾ ದೇವಿಯ ಅದ್ಧೂರಿ ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ಕಿಡಿಗೇಡಿಗಳ ಅಟ್ಟಹಾಸ ಮಸಿ ಬಳಿದಿದೆ. ಲಕ್ಷಾಂತರ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಳ್ಳುವ ಈ ಪವಿತ್ರ ಕಾರ್ಯಕ್ರಮದಲ್ಲಿ ಕೆಲವು ಪುಂಡ ಯುವಕರು ಪೈಶಾಚಿಕವಾಗಿ ವರ್ತಿಸಿದ್ದು, ಸಾರ್ವಜನಿಕರ ಮೇಲೆ ಭೀಕರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.

ಪ್ರಾಣಿಗಳ ಕಾಲಿನಿಂದ ಹಲ್ಲೆ: ವಿಕೃತಿಯ ಪರಮಾವಧಿ

ದುರ್ಗಾಂಬಿಕಾ ದೇವಿ ದೇವಸ್ಥಾನದ ಸಮೀಪದ ರಸ್ತೆಗಳಲ್ಲಿ ಈ ಘಟನೆ ನಡೆದಿದೆ. ಜಾತ್ರೆಯ ಸಂಪ್ರದಾಯದಂತೆ ದೇವಿಗೆ ಪ್ರಾಣಿ ಬಲಿ ನೀಡಲಾಗಿದ್ದು, ಆ ಬಲಿ ಕೊಟ್ಟ ಪ್ರಾಣಿಗಳ ಕಾಲುಗಳನ್ನು ಹಿಡಿದುಕೊಂಡು ಬಂದಿದ್ದ ಕಿಡಿಗೇಡಿ ಯುವಕರ ಗುಂಪೊಂದು, ಸಿಕ್ಕಸಿಕ್ಕವರ ಮೇಲೆ ಮನಬಂದಂತೆ ಹಲ್ಲೆ ನಡೆಸಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಭಕ್ತರು, ಹಿರಿಯರು ಎನ್ನದೆ ಎಲ್ಲರ ಮೇಲೂ ಪ್ರಾಣಿಗಳ ಕಾಲಿನಿಂದ ಹೊಡೆದು ವಿಕೃತಿ ಮೆರೆದಿದ್ದಾರೆ.

ಜೀವ ಉಳಿಸಿಕೊಳ್ಳಲು ಭಕ್ತರ ಓಟ: ವಿಡಿಯೋ ವೈರಲ್ 

ಯುವಕರ ಈ ಹಠಾತ್ ದಾಳಿಯಿಂದ ಗಾಬರಿಗೊಂಡ ಭಕ್ತರು ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಆತಂಕಕ್ಕೊಳಗಾಗಿ ಕಿರುಚುತ್ತಾ ಓಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಭಕ್ತಿಯ ತಾಣವಾಗಬೇಕಿದ್ದ ದೇವಸ್ಥಾನದ ಆವರಣವು ಈ ಕಿಡಿಗೇಡಿಗಳಿಂದಾಗಿ ರಣರಂಗದಂತಾಗಿತ್ತು. ಸಾರ್ವಜನಿಕರು ಈ ವಿಕೃತ ವರ್ತನೆಯನ್ನು ಕಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ, ಆಸ್ತಿ ಹಾನಿ 

ಕೇವಲ ಜನರ ಮೇಲೆ ಹಲ್ಲೆ ಮಾಡುವುದು ಮಾತ್ರವಲ್ಲದೆ, ನಗರದ ತ್ರಿಶೂಲ್ ಟಾಕೀಸ್ ಭಾಗದಲ್ಲಿಯೂ ಕಿಡಿಗೇಡಿಗಳು ಪುಂಡಾಟಿಕೆ ನಡೆಸಿದ್ದಾರೆ. ರಸ್ತೆ ಬದಿಯಲ್ಲಿದ್ದ ಸಣ್ಣಪುಟ್ಟ 'ಡಬ್ಬಾ' ಅಂಗಡಿಗಳ ಮೇಲೆ ದಾಳಿ ನಡೆಸಿ, ಅವುಗಳನ್ನು ಜಖಂಗೊಳಿಸಿದ್ದಾರೆ. ಬಡ ವ್ಯಾಪಾರಿಗಳ ಹೊಟ್ಟೆಯ ಮೇಲೆ ಹೊಡೆದಿರುವ ಈ ಕಿಡಿಗೇಡಿಗಳು ಸಾರ್ವಜನಿಕ ಆಸ್ತಪಾಸ್ತಿಗಳಿಗೂ ಹಾನಿ ಮಾಡಿದ್ದಾರೆ.

ಪೊಲೀಸ್ ಬಿಗಿ ಬಂದೋಬಸ್ತ್‌ಗೆ ಆಗ್ರಹ

ದಾವಣಗೆರೆ ಜಾತ್ರೆ ಎಂದರೆ ಸುತ್ತಮುತ್ತಲ ಜಿಲ್ಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಇಂತಹ ಸಂದರ್ಭದಲ್ಲಿ ಕಿಡಿಗೇಡಿಗಳು ಇಷ್ಟು ಧೈರ್ಯವಾಗಿ ಹಲ್ಲೆ ನಡೆಸುತ್ತಿರುವುದು ಪೊಲೀಸ್ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ನಾಗರಿಕರು ಆರೋಪಿಸುತ್ತಿದ್ದಾರೆ. ಈ ಪುಂಡರ ಗುಂಪನ್ನು ಕೂಡಲೇ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಜಾತ್ರೆಯ ಪಾವಿತ್ರ್ಯತೆಯನ್ನು ಹಾಳು ಮಾಡುವ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಹದ್ದಿನ ಕಣ್ಣಿಡಬೇಕಿದೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more