ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

Published : Dec 23, 2024, 10:29 PM IST

ದಾವಣಗೆರೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಕುರ್‌ಕುರೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಯಲ್ಲಿ 10 ಜನ ಆಸ್ಪತ್ರೆಗೆ ದಾಖಲಾಗಿದ್ದು, 25 ಜನ ಊರು ಬಿಟ್ಟಿದ್ದಾರೆ.

ಕುರ್‌ಕುರೇ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದು 10 ಜನ ಆಸ್ಪತ್ರೆಗೆ ದಾಖಲಾಗಿ, 25 ಮಂದಿ ಊರು ಬಿಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹೊನ್ನೇಬಾಗಿಯ ಅತೀಫ್ ಉಲ್ಲಾ ಫ್ಯಾಮಿಲಿ ಹಾಗೂ ಸದ್ದಾಂ ಎಂಬ ಫ್ಯಾಮಿಲಿ ನಡುವೆ ಮಾರಾಮಾರಿಯಾಗಿದ್ದು, ಅತೀಪ್‌ ಉಲ್ಲಾ ಅದೇ ಗ್ರಾಮದಲ್ಲಿ ಸಣ್ಣದೊಂದು ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು.ಅತೀಫ್‌ ಉಲ್ಲಾ ಅಂಗಡಿಯಲ್ಲಿ ಸದ್ದಾಂ ಕುಟುಂಬದ ಮಕ್ಕಳು ಕುರ್‌ಕುರೇ ಖರೀದಿ ಮಾಡಿದ್ದರು. ಎಕ್ಸಪರಿಯಾದ ಕುರ್‌ಕುರೇ ಮಾರಾಟ ಮಾಡಿದ್ದೀಯಾ ಬೇರೆಯದ್ದು ಕೊಡು ಅಂತ ಕೇಳಿದ್ದಕ್ಕೆ ಎರಡು ಕುಟುಂಬಸ್ಥರ ನಡುವೆ  ಜಗಳ ನಡೆದಿದೆ. ಈ ಸಮಯದಲ್ಲಿ ಅತೀಫ್ ಹಾಗೂ ಸದ್ದಾಂ ಕುಟುಂಬಸ್ಥರು ನಡುವೆ ಮಾತಿನ ಚಕಮಕಿ ಮೀತಿ ಮೀರಿ ಎರಡು ಕುಟುಂಬದ ಸದಸ್ಯರು ಪರಸ್ಪರ ಕೈ ಕೈ ಮೀಲಾಯಿಸಿ ಹೊಡೆದಾಡಿಕೊಂಡಿದ್ದಾರೆ.

ಸದ್ದಾಂ ಕುಟುಂಬ ರಸ್ತೆ ಬದಿ ಹೋಟೆಲ್‌ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ವಾಗ್ವಾದ ಮತ್ತು ಗಲಾಟೆ ಹಿನ್ನೆಲೆ ಅತೀಫ್‌ ವಿರುದ್ಧ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಸದ್ದಾಂ ದೂರು ನೀಡಿದ್ದಾರೆ. ಅದೇ ದ್ವೇಷ ಇಟ್ಟುಕೊಂಡು ಅತೀಫ್ ಪರವಾಗಿದ್ದ 30ಕ್ಕೂ ಹೆಚ್ವು ಜನ ಸದ್ದಾಂ ಕುಟುಂಬಸ್ಥರ‌ ಮೇಲೆ‌ ಹಲ್ಲೆ ಮಾಡಿ ಹೋಟೆಲ್ ಧ್ವಂಸ ಮಾಡಿದ್ದಾರೆಂದು ಆರೋಪಿಸಲಾಗಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more