ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

Published : Dec 23, 2024, 10:29 PM IST

ದಾವಣಗೆರೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಕುರ್‌ಕುರೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಯಲ್ಲಿ 10 ಜನ ಆಸ್ಪತ್ರೆಗೆ ದಾಖಲಾಗಿದ್ದು, 25 ಜನ ಊರು ಬಿಟ್ಟಿದ್ದಾರೆ.

ಕುರ್‌ಕುರೇ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದು 10 ಜನ ಆಸ್ಪತ್ರೆಗೆ ದಾಖಲಾಗಿ, 25 ಮಂದಿ ಊರು ಬಿಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹೊನ್ನೇಬಾಗಿಯ ಅತೀಫ್ ಉಲ್ಲಾ ಫ್ಯಾಮಿಲಿ ಹಾಗೂ ಸದ್ದಾಂ ಎಂಬ ಫ್ಯಾಮಿಲಿ ನಡುವೆ ಮಾರಾಮಾರಿಯಾಗಿದ್ದು, ಅತೀಪ್‌ ಉಲ್ಲಾ ಅದೇ ಗ್ರಾಮದಲ್ಲಿ ಸಣ್ಣದೊಂದು ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು.ಅತೀಫ್‌ ಉಲ್ಲಾ ಅಂಗಡಿಯಲ್ಲಿ ಸದ್ದಾಂ ಕುಟುಂಬದ ಮಕ್ಕಳು ಕುರ್‌ಕುರೇ ಖರೀದಿ ಮಾಡಿದ್ದರು. ಎಕ್ಸಪರಿಯಾದ ಕುರ್‌ಕುರೇ ಮಾರಾಟ ಮಾಡಿದ್ದೀಯಾ ಬೇರೆಯದ್ದು ಕೊಡು ಅಂತ ಕೇಳಿದ್ದಕ್ಕೆ ಎರಡು ಕುಟುಂಬಸ್ಥರ ನಡುವೆ  ಜಗಳ ನಡೆದಿದೆ. ಈ ಸಮಯದಲ್ಲಿ ಅತೀಫ್ ಹಾಗೂ ಸದ್ದಾಂ ಕುಟುಂಬಸ್ಥರು ನಡುವೆ ಮಾತಿನ ಚಕಮಕಿ ಮೀತಿ ಮೀರಿ ಎರಡು ಕುಟುಂಬದ ಸದಸ್ಯರು ಪರಸ್ಪರ ಕೈ ಕೈ ಮೀಲಾಯಿಸಿ ಹೊಡೆದಾಡಿಕೊಂಡಿದ್ದಾರೆ.

ಸದ್ದಾಂ ಕುಟುಂಬ ರಸ್ತೆ ಬದಿ ಹೋಟೆಲ್‌ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ವಾಗ್ವಾದ ಮತ್ತು ಗಲಾಟೆ ಹಿನ್ನೆಲೆ ಅತೀಫ್‌ ವಿರುದ್ಧ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಸದ್ದಾಂ ದೂರು ನೀಡಿದ್ದಾರೆ. ಅದೇ ದ್ವೇಷ ಇಟ್ಟುಕೊಂಡು ಅತೀಫ್ ಪರವಾಗಿದ್ದ 30ಕ್ಕೂ ಹೆಚ್ವು ಜನ ಸದ್ದಾಂ ಕುಟುಂಬಸ್ಥರ‌ ಮೇಲೆ‌ ಹಲ್ಲೆ ಮಾಡಿ ಹೋಟೆಲ್ ಧ್ವಂಸ ಮಾಡಿದ್ದಾರೆಂದು ಆರೋಪಿಸಲಾಗಿದೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more