ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

Published : Dec 23, 2024, 10:29 PM IST

ದಾವಣಗೆರೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಕುರ್‌ಕುರೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಯಲ್ಲಿ 10 ಜನ ಆಸ್ಪತ್ರೆಗೆ ದಾಖಲಾಗಿದ್ದು, 25 ಜನ ಊರು ಬಿಟ್ಟಿದ್ದಾರೆ.

ಕುರ್‌ಕುರೇ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದು 10 ಜನ ಆಸ್ಪತ್ರೆಗೆ ದಾಖಲಾಗಿ, 25 ಮಂದಿ ಊರು ಬಿಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹೊನ್ನೇಬಾಗಿಯ ಅತೀಫ್ ಉಲ್ಲಾ ಫ್ಯಾಮಿಲಿ ಹಾಗೂ ಸದ್ದಾಂ ಎಂಬ ಫ್ಯಾಮಿಲಿ ನಡುವೆ ಮಾರಾಮಾರಿಯಾಗಿದ್ದು, ಅತೀಪ್‌ ಉಲ್ಲಾ ಅದೇ ಗ್ರಾಮದಲ್ಲಿ ಸಣ್ಣದೊಂದು ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು.ಅತೀಫ್‌ ಉಲ್ಲಾ ಅಂಗಡಿಯಲ್ಲಿ ಸದ್ದಾಂ ಕುಟುಂಬದ ಮಕ್ಕಳು ಕುರ್‌ಕುರೇ ಖರೀದಿ ಮಾಡಿದ್ದರು. ಎಕ್ಸಪರಿಯಾದ ಕುರ್‌ಕುರೇ ಮಾರಾಟ ಮಾಡಿದ್ದೀಯಾ ಬೇರೆಯದ್ದು ಕೊಡು ಅಂತ ಕೇಳಿದ್ದಕ್ಕೆ ಎರಡು ಕುಟುಂಬಸ್ಥರ ನಡುವೆ  ಜಗಳ ನಡೆದಿದೆ. ಈ ಸಮಯದಲ್ಲಿ ಅತೀಫ್ ಹಾಗೂ ಸದ್ದಾಂ ಕುಟುಂಬಸ್ಥರು ನಡುವೆ ಮಾತಿನ ಚಕಮಕಿ ಮೀತಿ ಮೀರಿ ಎರಡು ಕುಟುಂಬದ ಸದಸ್ಯರು ಪರಸ್ಪರ ಕೈ ಕೈ ಮೀಲಾಯಿಸಿ ಹೊಡೆದಾಡಿಕೊಂಡಿದ್ದಾರೆ.

ಸದ್ದಾಂ ಕುಟುಂಬ ರಸ್ತೆ ಬದಿ ಹೋಟೆಲ್‌ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ವಾಗ್ವಾದ ಮತ್ತು ಗಲಾಟೆ ಹಿನ್ನೆಲೆ ಅತೀಫ್‌ ವಿರುದ್ಧ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಸದ್ದಾಂ ದೂರು ನೀಡಿದ್ದಾರೆ. ಅದೇ ದ್ವೇಷ ಇಟ್ಟುಕೊಂಡು ಅತೀಫ್ ಪರವಾಗಿದ್ದ 30ಕ್ಕೂ ಹೆಚ್ವು ಜನ ಸದ್ದಾಂ ಕುಟುಂಬಸ್ಥರ‌ ಮೇಲೆ‌ ಹಲ್ಲೆ ಮಾಡಿ ಹೋಟೆಲ್ ಧ್ವಂಸ ಮಾಡಿದ್ದಾರೆಂದು ಆರೋಪಿಸಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more