ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

Published : Dec 23, 2024, 10:29 PM IST

ದಾವಣಗೆರೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಕುರ್‌ಕುರೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಯಲ್ಲಿ 10 ಜನ ಆಸ್ಪತ್ರೆಗೆ ದಾಖಲಾಗಿದ್ದು, 25 ಜನ ಊರು ಬಿಟ್ಟಿದ್ದಾರೆ.

ಕುರ್‌ಕುರೇ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದು 10 ಜನ ಆಸ್ಪತ್ರೆಗೆ ದಾಖಲಾಗಿ, 25 ಮಂದಿ ಊರು ಬಿಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹೊನ್ನೇಬಾಗಿಯ ಅತೀಫ್ ಉಲ್ಲಾ ಫ್ಯಾಮಿಲಿ ಹಾಗೂ ಸದ್ದಾಂ ಎಂಬ ಫ್ಯಾಮಿಲಿ ನಡುವೆ ಮಾರಾಮಾರಿಯಾಗಿದ್ದು, ಅತೀಪ್‌ ಉಲ್ಲಾ ಅದೇ ಗ್ರಾಮದಲ್ಲಿ ಸಣ್ಣದೊಂದು ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು.ಅತೀಫ್‌ ಉಲ್ಲಾ ಅಂಗಡಿಯಲ್ಲಿ ಸದ್ದಾಂ ಕುಟುಂಬದ ಮಕ್ಕಳು ಕುರ್‌ಕುರೇ ಖರೀದಿ ಮಾಡಿದ್ದರು. ಎಕ್ಸಪರಿಯಾದ ಕುರ್‌ಕುರೇ ಮಾರಾಟ ಮಾಡಿದ್ದೀಯಾ ಬೇರೆಯದ್ದು ಕೊಡು ಅಂತ ಕೇಳಿದ್ದಕ್ಕೆ ಎರಡು ಕುಟುಂಬಸ್ಥರ ನಡುವೆ  ಜಗಳ ನಡೆದಿದೆ. ಈ ಸಮಯದಲ್ಲಿ ಅತೀಫ್ ಹಾಗೂ ಸದ್ದಾಂ ಕುಟುಂಬಸ್ಥರು ನಡುವೆ ಮಾತಿನ ಚಕಮಕಿ ಮೀತಿ ಮೀರಿ ಎರಡು ಕುಟುಂಬದ ಸದಸ್ಯರು ಪರಸ್ಪರ ಕೈ ಕೈ ಮೀಲಾಯಿಸಿ ಹೊಡೆದಾಡಿಕೊಂಡಿದ್ದಾರೆ.

ಸದ್ದಾಂ ಕುಟುಂಬ ರಸ್ತೆ ಬದಿ ಹೋಟೆಲ್‌ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ವಾಗ್ವಾದ ಮತ್ತು ಗಲಾಟೆ ಹಿನ್ನೆಲೆ ಅತೀಫ್‌ ವಿರುದ್ಧ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಸದ್ದಾಂ ದೂರು ನೀಡಿದ್ದಾರೆ. ಅದೇ ದ್ವೇಷ ಇಟ್ಟುಕೊಂಡು ಅತೀಫ್ ಪರವಾಗಿದ್ದ 30ಕ್ಕೂ ಹೆಚ್ವು ಜನ ಸದ್ದಾಂ ಕುಟುಂಬಸ್ಥರ‌ ಮೇಲೆ‌ ಹಲ್ಲೆ ಮಾಡಿ ಹೋಟೆಲ್ ಧ್ವಂಸ ಮಾಡಿದ್ದಾರೆಂದು ಆರೋಪಿಸಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more