ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!

Published : Dec 23, 2024, 10:29 PM IST

ದಾವಣಗೆರೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಕುರ್‌ಕುರೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಯಲ್ಲಿ 10 ಜನ ಆಸ್ಪತ್ರೆಗೆ ದಾಖಲಾಗಿದ್ದು, 25 ಜನ ಊರು ಬಿಟ್ಟಿದ್ದಾರೆ.

ಕುರ್‌ಕುರೇ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದು 10 ಜನ ಆಸ್ಪತ್ರೆಗೆ ದಾಖಲಾಗಿ, 25 ಮಂದಿ ಊರು ಬಿಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹೊನ್ನೇಬಾಗಿಯ ಅತೀಫ್ ಉಲ್ಲಾ ಫ್ಯಾಮಿಲಿ ಹಾಗೂ ಸದ್ದಾಂ ಎಂಬ ಫ್ಯಾಮಿಲಿ ನಡುವೆ ಮಾರಾಮಾರಿಯಾಗಿದ್ದು, ಅತೀಪ್‌ ಉಲ್ಲಾ ಅದೇ ಗ್ರಾಮದಲ್ಲಿ ಸಣ್ಣದೊಂದು ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು.ಅತೀಫ್‌ ಉಲ್ಲಾ ಅಂಗಡಿಯಲ್ಲಿ ಸದ್ದಾಂ ಕುಟುಂಬದ ಮಕ್ಕಳು ಕುರ್‌ಕುರೇ ಖರೀದಿ ಮಾಡಿದ್ದರು. ಎಕ್ಸಪರಿಯಾದ ಕುರ್‌ಕುರೇ ಮಾರಾಟ ಮಾಡಿದ್ದೀಯಾ ಬೇರೆಯದ್ದು ಕೊಡು ಅಂತ ಕೇಳಿದ್ದಕ್ಕೆ ಎರಡು ಕುಟುಂಬಸ್ಥರ ನಡುವೆ  ಜಗಳ ನಡೆದಿದೆ. ಈ ಸಮಯದಲ್ಲಿ ಅತೀಫ್ ಹಾಗೂ ಸದ್ದಾಂ ಕುಟುಂಬಸ್ಥರು ನಡುವೆ ಮಾತಿನ ಚಕಮಕಿ ಮೀತಿ ಮೀರಿ ಎರಡು ಕುಟುಂಬದ ಸದಸ್ಯರು ಪರಸ್ಪರ ಕೈ ಕೈ ಮೀಲಾಯಿಸಿ ಹೊಡೆದಾಡಿಕೊಂಡಿದ್ದಾರೆ.

ಸದ್ದಾಂ ಕುಟುಂಬ ರಸ್ತೆ ಬದಿ ಹೋಟೆಲ್‌ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ವಾಗ್ವಾದ ಮತ್ತು ಗಲಾಟೆ ಹಿನ್ನೆಲೆ ಅತೀಫ್‌ ವಿರುದ್ಧ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಸದ್ದಾಂ ದೂರು ನೀಡಿದ್ದಾರೆ. ಅದೇ ದ್ವೇಷ ಇಟ್ಟುಕೊಂಡು ಅತೀಫ್ ಪರವಾಗಿದ್ದ 30ಕ್ಕೂ ಹೆಚ್ವು ಜನ ಸದ್ದಾಂ ಕುಟುಂಬಸ್ಥರ‌ ಮೇಲೆ‌ ಹಲ್ಲೆ ಮಾಡಿ ಹೋಟೆಲ್ ಧ್ವಂಸ ಮಾಡಿದ್ದಾರೆಂದು ಆರೋಪಿಸಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more