ಬಾಗಲಕೋಟೆ: ಸಾಮಾಜಿಕ ಅಂತರ ಕಾಯ್ದುಕೊಳ್ಳದ DCM ಗೋವಿಂದ ಕಾರಜೋಳ

Jun 18, 2020, 1:50 PM IST

ಬಾಗಲಕೋಟೆ(ಜೂ.18): ಡಿಸಿಎಂ ಗೋವಿಂದ ಕಾರಜೋಳ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಿದ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಿನ್ನೆ(ಬುಧವಾರ) ಘಟನೆ ನಡೆದಿದೆ. ಗೋವಿಂದ ಕಾರಜೋಳ ಅವರು ಗುಂಪು ಗುಂಪಾಗಿ ಸೇರಿ ವಸತಿ ಶಾಲೆ ಕಟ್ಟಡದ ಭೂಮಿ ಪೂಜೆಯನ್ನ ನೆರವೇರಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

ಸೂಳೇಭಾವಿ ಗ್ರಾಮದ ಕಿತ್ತೂರ ಚೆನ್ನಮ್ಮ ವಸತಿ ಶಾಲೆಯ ಕಟ್ಟಡ ಭೂಮಿ ಪೂಜೆಯ ವೇಳೆ ಸಾಮಾಜಿಕ ಅಂತರವಿಲ್ಲ, ಕೆಲವರು ಮುಖಕ್ಕೆ ಮಾಸ್ಕ್ ಕೂಡ ಧರಿಸಿಲ್ಲ. ಜಿಲ್ಲೆಯಲ್ಲಿ ನಿನ್ನೆ ನಡೆದ ಬಹುತೇಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಡಿಸಿಎಂ ಕಾರಜೋಳ ಅವರು ಸಾಮಾಜಿಕ ಅಂತರನ್ನ ಪಾಲನೆ ಮಾಡಿಲ್ಲ.