ಬಂಜಾರ ಸಮುದಾಯ ವಿಶೇಷ ದೀಪಾವಳಿ ಆಚರಣೆ: ಮನೆ ಮನೆಗೂ ತೆರಳಿ ದೀಪ ಬೆಳಗಿದ ಯುವತಿಯರು

ಬಂಜಾರ ಸಮುದಾಯ ವಿಶೇಷ ದೀಪಾವಳಿ ಆಚರಣೆ: ಮನೆ ಮನೆಗೂ ತೆರಳಿ ದೀಪ ಬೆಳಗಿದ ಯುವತಿಯರು

Published : Nov 14, 2023, 11:47 AM IST

ಬೆಳಕಿನ ಹಬ್ಬ ದೀಪಾವಳಿ ಬಂತಂದ್ರೆ ಸಾಕು ಪ್ರತೀ ಮನೆಯಲ್ಲಿ ಸಂಭ್ರಮ ಮನೆ ಮಾಡಿರುತ್ತೆ. ಆದ್ರೆ ಕೋಟೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಬಂಜಾರ ಸಮುದಾಯ ಆಚರಿಸುವ ದೀಪಾವಳಿ ಹಬ್ಬದ ವಿಶೇಷತೆಯೇ ಬೇರೆಯಾಗಿರುತ್ತೆ. 
 

ದೀಪಾವಳಿ ಅಂದ್ರೆ ಮನೆ ಮನದಲ್ಲೂ ಸಂತಸ ಸಂಭ್ರಮ. ವಿಶೇಷವಾಗಿ ಬಂಜಾರ ಸಮುದಾಯದಲ್ಲಿ ದೀಪಾವಳಿಯ(Deepavali) ಆಚರಣೆಯೇ ವಿಭಿನ್ನ. ಕೋಟೆನಾಡು ಚಿತ್ರದುರ್ಗ(Chitradurga) ಜಿಲ್ಲೆಯ ಭರಮಸಾಗರ, ಹೊಳಲ್ಕೆರೆ ವ್ಯಾಪ್ತಿಯಲ್ಲಿ ಬರುವ ಹೆಚ್ಚಿನ ಲಂಬಾಣಿ ತಾಂಡಾಗಳಲ್ಲಿ(Lambani community) ಬೆಳಕಿನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗ್ತದೆ. ಲಂಬಾಣಿ ಸಮುದಾಯದ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ಗುಂಪು ಗುಂಪಾಗಿ ಒಂದೆಡೆ ಸೇರಿ ನೃತ್ಯ ಮಾಡೋದೆ ವಿಶೇಷ. ಸಮುದಾಯದ ಸಂಸ್ಕೃತಿ, ಪರಂಪರೆ ಉಳಿಸಲು ಸಂಭ್ರಮದಿಂದ ಆಚರಿಸ್ತೀವಿ ಅಂತಾರೆ ಬಂಜಾರ ಸಮುದಾಯದ ಮುಖಂಡರು. ತಾಂಡಾಗಳಲ್ಲಿ ಎಲ್ಲ ಯುವತಿಯರು ಲಂಬಾಣಿ ಉಡುಗೆಯನ್ನು ತೊಟ್ಟು, ಅಮಾವಾಸೆ ರಾತ್ರಿ ದಿನ ಪ್ರತೀ ಮನೆಗೆ ದೀಪ ಹಿಡಿದುಕೊಂಡು ತೆರಳಿ, ನಿಮ್ಮ ಮನೆಯಲ್ಲಿಯೂ ದೀಪ ಬೆಳಗಲಿ, ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸ್ತಾರೆ.ಸಂಸ್ಕೃತಿಯ ನೆಲೆಬೀಡು  ಕರುನಾಡಲ್ಲಿ ಇಂದಿಗೂ ಹಳೆಯ ಸಂಪ್ರದಾಯಗಳನ್ನು ಗ್ರಾಮೀಣ ಭಾಗದಲ್ಲಿ ಉಳಿಸಿ, ಬೆಳೆಸಿಕೊಂಡು ಹೋಗಲಾಗುತ್ತಿದೆ. ಇದಕ್ಕೆ ಈ ಬಂಜಾರ ಸಮುಧಾಯದ ಈ ವಿಶೇಷ ಆಚರಣೆಯೇ  ಸಾಕ್ಷಿಯಾಗಿದೆ.

ಇದನ್ನೂ ವೀಕ್ಷಿಸಿ:  ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more