ಬಂಜಾರ ಸಮುದಾಯ ವಿಶೇಷ ದೀಪಾವಳಿ ಆಚರಣೆ: ಮನೆ ಮನೆಗೂ ತೆರಳಿ ದೀಪ ಬೆಳಗಿದ ಯುವತಿಯರು

ಬಂಜಾರ ಸಮುದಾಯ ವಿಶೇಷ ದೀಪಾವಳಿ ಆಚರಣೆ: ಮನೆ ಮನೆಗೂ ತೆರಳಿ ದೀಪ ಬೆಳಗಿದ ಯುವತಿಯರು

Published : Nov 14, 2023, 11:47 AM IST

ಬೆಳಕಿನ ಹಬ್ಬ ದೀಪಾವಳಿ ಬಂತಂದ್ರೆ ಸಾಕು ಪ್ರತೀ ಮನೆಯಲ್ಲಿ ಸಂಭ್ರಮ ಮನೆ ಮಾಡಿರುತ್ತೆ. ಆದ್ರೆ ಕೋಟೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಬಂಜಾರ ಸಮುದಾಯ ಆಚರಿಸುವ ದೀಪಾವಳಿ ಹಬ್ಬದ ವಿಶೇಷತೆಯೇ ಬೇರೆಯಾಗಿರುತ್ತೆ. 
 

ದೀಪಾವಳಿ ಅಂದ್ರೆ ಮನೆ ಮನದಲ್ಲೂ ಸಂತಸ ಸಂಭ್ರಮ. ವಿಶೇಷವಾಗಿ ಬಂಜಾರ ಸಮುದಾಯದಲ್ಲಿ ದೀಪಾವಳಿಯ(Deepavali) ಆಚರಣೆಯೇ ವಿಭಿನ್ನ. ಕೋಟೆನಾಡು ಚಿತ್ರದುರ್ಗ(Chitradurga) ಜಿಲ್ಲೆಯ ಭರಮಸಾಗರ, ಹೊಳಲ್ಕೆರೆ ವ್ಯಾಪ್ತಿಯಲ್ಲಿ ಬರುವ ಹೆಚ್ಚಿನ ಲಂಬಾಣಿ ತಾಂಡಾಗಳಲ್ಲಿ(Lambani community) ಬೆಳಕಿನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗ್ತದೆ. ಲಂಬಾಣಿ ಸಮುದಾಯದ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ಗುಂಪು ಗುಂಪಾಗಿ ಒಂದೆಡೆ ಸೇರಿ ನೃತ್ಯ ಮಾಡೋದೆ ವಿಶೇಷ. ಸಮುದಾಯದ ಸಂಸ್ಕೃತಿ, ಪರಂಪರೆ ಉಳಿಸಲು ಸಂಭ್ರಮದಿಂದ ಆಚರಿಸ್ತೀವಿ ಅಂತಾರೆ ಬಂಜಾರ ಸಮುದಾಯದ ಮುಖಂಡರು. ತಾಂಡಾಗಳಲ್ಲಿ ಎಲ್ಲ ಯುವತಿಯರು ಲಂಬಾಣಿ ಉಡುಗೆಯನ್ನು ತೊಟ್ಟು, ಅಮಾವಾಸೆ ರಾತ್ರಿ ದಿನ ಪ್ರತೀ ಮನೆಗೆ ದೀಪ ಹಿಡಿದುಕೊಂಡು ತೆರಳಿ, ನಿಮ್ಮ ಮನೆಯಲ್ಲಿಯೂ ದೀಪ ಬೆಳಗಲಿ, ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸ್ತಾರೆ.ಸಂಸ್ಕೃತಿಯ ನೆಲೆಬೀಡು  ಕರುನಾಡಲ್ಲಿ ಇಂದಿಗೂ ಹಳೆಯ ಸಂಪ್ರದಾಯಗಳನ್ನು ಗ್ರಾಮೀಣ ಭಾಗದಲ್ಲಿ ಉಳಿಸಿ, ಬೆಳೆಸಿಕೊಂಡು ಹೋಗಲಾಗುತ್ತಿದೆ. ಇದಕ್ಕೆ ಈ ಬಂಜಾರ ಸಮುಧಾಯದ ಈ ವಿಶೇಷ ಆಚರಣೆಯೇ  ಸಾಕ್ಷಿಯಾಗಿದೆ.

ಇದನ್ನೂ ವೀಕ್ಷಿಸಿ:  ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more