Deepavali;  ಉಡುಪಿಯಲ್ಲಿ ದೀಪಗಳ ಹಬ್ಬದ ಸಂಭ್ರಮ, ತೈಲಾಭ್ಯಂಜನ

Deepavali;  ಉಡುಪಿಯಲ್ಲಿ ದೀಪಗಳ ಹಬ್ಬದ ಸಂಭ್ರಮ, ತೈಲಾಭ್ಯಂಜನ

Published : Nov 05, 2021, 07:35 PM IST

* ಕೃಷ್ಣಮಠದ ಗರ್ಭಗುಡಿಯ ಸುತ್ತಲೂ ಸಾವಿರಾರು ದೀಪಗಳು
* ಪಶ್ಚಿಮ ಜಾಗರ ಪೂಜೆಯಲ್ಲಿ ಮಿನುಗಿದ ಕೃಷ್ಣ
* ನರಕಚತುರ್ದಶಿಯ ತೈಲಾಭ್ಯಂಜನದಲ್ಲಿ ಅದಮಾರುಶ್ರೀ ಭಾಗಿ
* ಲಕ್ಷದೀಪೋತ್ಸವದವರೆಗೆ ಪ್ರತಿದಿನವೂ ತುಳಸೀ ಸಂಕೀರ್ತನೆ 
* ಕಾರ್ತಿಕ ಮಾಸದಲ್ಲಿ ನಡೆಯುವ ಪಶ್ಚಿಮ ಜಾಗರ ಪೂಜೆ, ಈ ದೀಪಾವಳಿಯ ವಿಶೇಷ

ಉಡುಪಿ(ನ. 05)   ಕೃಷ್ಣನ ಉಡುಪಿಯಲ್ಲಿ (Udupi) ದೀಪಾವಳಿ (Deepavali) ಸಂಭ್ರಮ ಮನೆಮಾಡಿದೆ. ನರಕಚತುರ್ದಶಿಯ ಪ್ರಯುಕ್ತ ಕೃಷ್ಣ ಮಠದಲ್ಲಿ (Krishna Mutt) ವಿಶೇಷ ಪೂಜೆಗಳು ನಡೆದವು. ಕಾರ್ತಿಕ ಮಾಸದಲ್ಲಿ ನಡೆಯುವ ಪಶ್ಚಿಮ ಜಾಗರ ಪೂಜೆ, ಈ ದೀಪಾವಳಿಯ ವಿಶೇಷ. ಕೃಷ್ಣ ಮಠದಲ್ಲಿ ನಡೆಯುವ ತೈಲಾಭ್ಯಂಜನದಲ್ಲೂ ಭಕ್ತರು ಭಾಗಿಯಾದರು.

ನರಕ ಚತುರ್ದಶಿ, ಕೃಷ್ಣ ದೇವರು ನರಕಾಸುರನ್ನು ಕೊಂದ ಬಳಿಕ ದೇಹದ ಉಲ್ಲಾಸಕ್ಕೆ ತೈಲಾಭ್ಯಂಜನ ಮಾಡಿಕೊಂಡ ದಿನ. ಹಾಗಾಗಿ ದೀಪಾವಳಿಯ ಮೊದಲ ದಿನ ತೈಲಾಭ್ಯಂಜನ ಮಾಡಿಕೊಳ್ಳೋದು ಪ್ರತೀತಿ. ಉಡುಪಿಯ ಕೃಷ್ಣಮಠದಲ್ಲಿ ಪರ್ಯಾಯ ಮಠಾಧೀಶರು ಭಕ್ತರೊಂದಿಗೆ ಬೆರೆತು ಅಭ್ಯಂಜನ ಮಾಡಿಕೊಳ್ಳುತ್ತಾರೆ. ಕೃಷ್ಣಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಕೃಷ್ಣ ದೇವರ ಗರ್ಭಗುಡಿಯ ಸುತ್ತಲೂ ಸಾವಿರಾರು ದೀಪಗಳನ್ನು ಬೆಳಗಾಯಿತು. ಕಾರ್ತಿಕ ಮಾಸದಲ್ಲಿ ನಡೆಯುವ ಪಶ್ಚಿಮ ಜಾಗರ ಪೂಜೆ, ಈ ದೀಪಾವಳಿಯ ವಿಶೇಷ. ಮುಂಜಾನೆಯ ವೇಳೆ ಪಕ್ಷಿಗಳು, ಕಲರವ ಮಾಡುವ ಹೊತ್ತಲ್ಲಿ ಕೃಷ್ಣ ದೇವರನ್ನು ಪರ್ಯಾಯ ಅದಮಾರು ಮಠಾಧೀಶರು, ಬಹು ಬಗೆಯಿಂದ ಪೂಜಿಸಿದರು. ನಸುಕಿನ ವೇಳೆ ಈ ವಿಶೇಷ ಪೂಜೆಯನ್ನು ನೋಡುವುದೇ ಒಂದು ಸಂಭ್ರಮ.

ಉಡುಪಿಯಲ್ಲಿ ಬಲೀಂದ್ರ ಪೂಜೆ, ದೀಪಾವಳಿ..ಪೋಟೋಗಳು

ನರಕ ಚತುರ್ದಶಿಯಂದು ಕೈಗೊಳ್ಳುವ ತೈಲಾಭ್ಯಂಜನಕ್ಕೆ ವಿಶೇಷ ಮಹತ್ವವಿದೆ. ಕೃಷ್ಣಮಠದ ಹೊರ ಸುತ್ತಿನಲ್ಲಿ ಬೃಹತ್ ಗಾತ್ರದ ಒಲೆಗಳನ್ನು ಇಟ್ಟು, ಪೂಜಿಸಲಾಗುತ್ತದೆ. ಸ್ವತಹ ಪರ್ಯಾಯ ಮಠಾಧೀಶರ ಉಪಸ್ಥಿತಿಯಲ್ಲಿ ಈ ಪೂಜೆ ನಡೆಯುತ್ತದೆ. ಕಟ್ಟಿಗೆಯ ಒಲೆಯಿಂದ ಕುದಿಸಿದ ನೀರಿನಲ್ಲಿ ಸಾಂಪ್ರದಾಯಿಕ ರೀತಿಯ ತೈಲಾಭ್ಯಂಜನ ನಡೆಸಲಾಗುತ್ತದೆ. ಕೃಷ್ಣ ದೇವರ ಸನ್ನಿಧಾನದಲ್ಲಿ ಈ ಎಲ್ಲಾ ಆಚರಣೆಗಳು ನಡೆಯುವುದರಿಂದ ವಿಶೇಷ ಮಹತ್ವವನ್ನು ಪಡೆದಿದೆ.

ದೀಪಾವಳಿಯುದ್ದಕ್ಕೂ ವಿವಿಧ ಆಚರಣೆಗಳು ಕೃಷ್ಣಮಠದಲ್ಲಿ ನಡೆಯುತ್ತೆ. ಲಕ್ಷದೀಪೋತ್ಸವದವರೆಗೆ ಪ್ರತಿದಿನವೂ ತುಳಸೀ ಸಂಕೀರ್ತನೆ ನಡೆಸಲಾಗುತ್ತೆ. ಕೃಷ್ಣಮಠದ ದೀಪಾವಳಿ ಆಚರಣೆಯಲ್ಲಿ ಸಾವಿರಾರು ಮಂದಿ ಭಾಗವಹಿಸುತ್ತಾರೆ. 

 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more